Home / ಕವನ / ಕವಿತೆ / ಮರಣಂ ಶರಣಂ

ಮರಣಂ ಶರಣಂ

ದಿನಪತ್ರಿಕೆಯ ಪುಟವ ತಿರುಗಿಸಲು
ಕಾಣುತಿಹವು ಸಾವು
ರೈತರ ಆತ್ಮಹತ್ಯೆ ಸಾವು
ಅಲ್ಲಿ ಸಾಯುವನು ಇಲ್ಲಿ ಸಾಯುವನು
ದಿನವು ಸಾಯುವರು ಮಣ್ಣಿನ ಮಕ್ಕಳು
ದಿನವು ಸಾಯುತಿದೆ ದೇಶದೊಕ್ಕಲು
ಬೆನ್ನೆಲುಬು ಬಾನು ಬಿಕ್ಕಲು
ಬೀಜ ಬಂಜೆಯಾಯಿತೋ ರೋಗ ಮುತ್ತಿತೋ
ಮಳೆಯು ಬಾರದೆ ಒಣಗಿ ಹೋಯಿತೋ
ಅಂತೂ ಇಂತೂ ನೆಲದ ಕಂದರಿಗೆ ಉಳಿವಿಲ್ಲವಾಯಿತೋ
ಸಣ್ಣ ಮಕ್ಕಳಿಗೆ ಕೂಳು ಇಲ್ಲವೋ
ಮನೆಯಲೆಲ್ಲರಿಗೆ ಕಾಳು ಇಲ್ಲವೋ
ಹರಕು ಬಟ್ಟೆಗಳೊ ಮುರುಕು ಜೋಪಡಿಯೋ
ಹೇಗೋ ಏನೊ ರೂಢಿಯಾಯಿತೊ
ಸಾಲ ಶೂಲವದು ಬಂದು ಇರಿವಾಗ
ಹೇಗಿದ್ದರೇನು ಸತ್ತರೇನು
ಸರಿ ಮರಣಂ ಶರಣಂ ಗಚ್ಛಾಮಿ

ಕೇಳದಾಗಿದೆ ಕಿವುಡು ಸರಕಾರ
ಕಾಣದಾಗಿದೆ ಕುರುಡು ದರಬಾರ
ಕೋಟಿಗಟ್ಟಲೆ ಬರ ಪರಿಹಾರ
ಹರಿದು ಬರುತಿದೆ ಯಾರ ಬಾಯಿಗೊ ಯಾರ ಜೇಬಿಗೊ
ಎಲ್ಲಿ ಹೋಗುವುದೊ ಯಾರು ಬಲ್ಲರು?
ಬೆವರ ಹನಿ ಹನಿ ಆವಿಯಾಯಿತು
ಸಾಯುವ ಜೀವಕೆ ಬಾಯಿಯೆ ಇಲ್ಲ
ಅಳುವ ಬಾಯಿಗೆ ದನಿಯೆ ಇಲ್ಲ
ರಾಜಧಾನಿಯಲ್ಲಿ ಹವಾನಿಯಂತ್ರದಿ
ನಿದ್ದೆ ಹೋಗಿಹರು ಮಂತ್ರಿ ದಾನವರು
ದಿನವೂ ಸಾರುತಿದೆ ಪತ್ರಿಕೆ
ರೈತನ ಸಾವು, ಸಾಯುವರು ಸಾಯುವರು

ನೆಲದ ನಿಟ್ಟುಸಿರು ಭೋರೆಂಬ ಗಾಳಿ
ಬರಿದೆ ಬೀಸೇ ಬೀಸುತಿರುವುದು
ಮೋಡದೊಡಲು ಗಡಬಡಿಸುತಿದೆ
ಒಂದೆರಡು ಹನಿ ಉದುರಿಸುತಿದೆ
ಅಶ್ರುತರ್ಪಣ ನಿಷ್ಕಾರಣ |
ಸುದ್ದಿ ಸಾರುವುದು ಪತ್ರಿಕೆ
ಮರುದಿನ ರದ್ದಿ ಅದೇ ಹಳೆ ಸುದ್ದಿ
ದಿನವೂ ಸಾಯುವವರಿಗೆ ಅಳುವವರು ಯಾರು
ಯಾರು ಕೆಡಿಸಿಕೊಳ್ಳುತ್ತಾರೆ ನಿದ್ದಿ
ಮರಣಂ ಶರಣಂ ಗಚ್ಛಾಮಿ

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...