Home / ಕವನ / ಕವಿತೆ / ಮರಣಂ ಶರಣಂ

ಮರಣಂ ಶರಣಂ

ದಿನಪತ್ರಿಕೆಯ ಪುಟವ ತಿರುಗಿಸಲು
ಕಾಣುತಿಹವು ಸಾವು
ರೈತರ ಆತ್ಮಹತ್ಯೆ ಸಾವು
ಅಲ್ಲಿ ಸಾಯುವನು ಇಲ್ಲಿ ಸಾಯುವನು
ದಿನವು ಸಾಯುವರು ಮಣ್ಣಿನ ಮಕ್ಕಳು
ದಿನವು ಸಾಯುತಿದೆ ದೇಶದೊಕ್ಕಲು
ಬೆನ್ನೆಲುಬು ಬಾನು ಬಿಕ್ಕಲು
ಬೀಜ ಬಂಜೆಯಾಯಿತೋ ರೋಗ ಮುತ್ತಿತೋ
ಮಳೆಯು ಬಾರದೆ ಒಣಗಿ ಹೋಯಿತೋ
ಅಂತೂ ಇಂತೂ ನೆಲದ ಕಂದರಿಗೆ ಉಳಿವಿಲ್ಲವಾಯಿತೋ
ಸಣ್ಣ ಮಕ್ಕಳಿಗೆ ಕೂಳು ಇಲ್ಲವೋ
ಮನೆಯಲೆಲ್ಲರಿಗೆ ಕಾಳು ಇಲ್ಲವೋ
ಹರಕು ಬಟ್ಟೆಗಳೊ ಮುರುಕು ಜೋಪಡಿಯೋ
ಹೇಗೋ ಏನೊ ರೂಢಿಯಾಯಿತೊ
ಸಾಲ ಶೂಲವದು ಬಂದು ಇರಿವಾಗ
ಹೇಗಿದ್ದರೇನು ಸತ್ತರೇನು
ಸರಿ ಮರಣಂ ಶರಣಂ ಗಚ್ಛಾಮಿ

ಕೇಳದಾಗಿದೆ ಕಿವುಡು ಸರಕಾರ
ಕಾಣದಾಗಿದೆ ಕುರುಡು ದರಬಾರ
ಕೋಟಿಗಟ್ಟಲೆ ಬರ ಪರಿಹಾರ
ಹರಿದು ಬರುತಿದೆ ಯಾರ ಬಾಯಿಗೊ ಯಾರ ಜೇಬಿಗೊ
ಎಲ್ಲಿ ಹೋಗುವುದೊ ಯಾರು ಬಲ್ಲರು?
ಬೆವರ ಹನಿ ಹನಿ ಆವಿಯಾಯಿತು
ಸಾಯುವ ಜೀವಕೆ ಬಾಯಿಯೆ ಇಲ್ಲ
ಅಳುವ ಬಾಯಿಗೆ ದನಿಯೆ ಇಲ್ಲ
ರಾಜಧಾನಿಯಲ್ಲಿ ಹವಾನಿಯಂತ್ರದಿ
ನಿದ್ದೆ ಹೋಗಿಹರು ಮಂತ್ರಿ ದಾನವರು
ದಿನವೂ ಸಾರುತಿದೆ ಪತ್ರಿಕೆ
ರೈತನ ಸಾವು, ಸಾಯುವರು ಸಾಯುವರು

ನೆಲದ ನಿಟ್ಟುಸಿರು ಭೋರೆಂಬ ಗಾಳಿ
ಬರಿದೆ ಬೀಸೇ ಬೀಸುತಿರುವುದು
ಮೋಡದೊಡಲು ಗಡಬಡಿಸುತಿದೆ
ಒಂದೆರಡು ಹನಿ ಉದುರಿಸುತಿದೆ
ಅಶ್ರುತರ್ಪಣ ನಿಷ್ಕಾರಣ |
ಸುದ್ದಿ ಸಾರುವುದು ಪತ್ರಿಕೆ
ಮರುದಿನ ರದ್ದಿ ಅದೇ ಹಳೆ ಸುದ್ದಿ
ದಿನವೂ ಸಾಯುವವರಿಗೆ ಅಳುವವರು ಯಾರು
ಯಾರು ಕೆಡಿಸಿಕೊಳ್ಳುತ್ತಾರೆ ನಿದ್ದಿ
ಮರಣಂ ಶರಣಂ ಗಚ್ಛಾಮಿ

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...