Home / ಲೇಖನ / ವಿಜ್ಞಾನ / ನಿಬ್ಬೆರಗಿನ ನಿವಾಸಿಗಳು !!

ನಿಬ್ಬೆರಗಿನ ನಿವಾಸಿಗಳು !!

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ
ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು
ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ
ಸೆನ್ಸಾರ್‌ಗಳಿಂದ ಮುಖವನ್ನು ಅಥವಾ ಕಣ್ಣಿನ ಐರಸ್ ಅನ್ನು ಪರೀಕ್ಷೆ ಮಾಡಿ ಗುರ್ತನ್ನು
ಖಚಿತಗೊಳಿಸಿಕೊಂಡು ಸ್ವಯಂ ಚಾಲಿತವಾಗಿ ಬಾಗಿಲುಗಳು ತಮ್ಮಿಂದ ತಾವೇ
ತೆರೆದುಕೊಳ್ಳುತ್ತವೆ. ಈ ತಂತ್ರಜ್ಞಾನ ಮುಂದೊಂದು ದಿನ ಬರಲಿದೆ, ಎಂದು ವಿಜ್ಞಾನಿಗಳ
ವ್ಯಾಖ್ಯಾನವಾಗಿದೆ. ಇದರಂತೆ ಆಹಾರ ಪದಾರ್ಥಗಳ ಅವಶ್ಯಕತೆಯನ್ನು”ರೆಫ್ರಿಜಿರೇಟರ್’ಗಳು
ಗುರುತಿಸುತ್ತವೆ. ಭವಿಷ್ಯದಲ್ಲಿ ತಂಗಳು ಪೆಟ್ಟಿಗೆಯಲ್ಲಿ ತರಕಾರಿ ಮುಗಿದು ಹೋದಾಗ ಆದು
ತನ್ನಿಂದ ತಾನೆ ಸ್ವಯಂಚಾಲಿತಗೊಂಡು ತರಕಾರಿ ಮಾರ್ಕೆಟ್ಟಿಗೆ ಸಂದೇಶವನ್ನು ರವಾನಿಸುತ್ತವೆ.
ಮೈಕ್ರೋ ಓವನ್ ಆಹಾರ ಪದಾರ್ಥಗಳ ತಯಾರಿಕೆಯನ್ನು ಪರಿಶೀಲಿಸುತ್ತದೆ.
ವಾಷಿಂಗ್‌ಮಿಷನ್ ಕೂಡ ತನಗೆ ಬೇಕಾದ ಡಿಟರ್ಜಂಟ್ ಫಾಬ್ರಿಕ್ ಸಾಫ್ಟ್‌ನರ್‌ಗಳನ್ನೂ
ಅಂಗಡಿಯಿಂದ ತರಿಸಿಕೊಳ್ಳುವ ಏರ್ಪಾಡು ಮಾಡುತ್ತದೆ.

ಮನೆಯ ಕಿಟಕಿಗಳಲ್ಲಿಯೂ ಕೂಡ ಕ್ರಾಂತಿಕಾರಕ ಬದಲಾವಣೆಯಾಗುತ್ತದೆ.
‘ಸಾಸ್ಮಾರ್ಟ್‌ಗ್ಲಾಸ್’ ಎಂಬ ತಿರುಗುವ ರೆಕ್ಕೆಗಳು ಆಕ್ಟಿವ್ ಎಲಿಮೆಂಟ್ಸ್ ಆಗಿ
ಕಾರ್ಯನಿರ್ವಹಿಸುತ್ತವೆ. ಅಂದರೆ ಸೂರ್ಯ ಕಿರಣಗಳ ಉಷ್ಟತೆ ಮತ್ತು ಬೆಳಕಿನ ತೀವ್ರತೆಗೆ
ತಕ್ಕಂತೆ ಸ್ವಯಂ ಚಾಲನೆಗೊಂಡು ನಮಗೆ ಅಗತ್ಯವಿದ್ದಷ್ಟು ಸೂರ್ಯರಶ್ಮಿಗಳನ್ನು ಒಳಗೆ
ಬರುವಂತೆ ಏರ್ಪಾಡು ಇರುತ್ತದೆ. ಹಾಗೆಯೇ ರಾತ್ರಿ ಸಮಯದಲ್ಲಿ ನಮ್ಮ ಏಕಾಂತಕ್ಕೆ
ಭಂಗವಾಗದಂತೆ ಕಿಟಕಿಗಳೆ ಹೊಂದಾಣಿಕೆಯಾಗುತ್ತವೆ. ಹೊರಗಿನಿಂದ ನೋಡಿದರೆ ಕಿಟಕಿಗಳು
ಗಾತ್ರದಲ್ಲಿ ಚಿಕ್ಕವು ಎನಿಸಿದರೂ ಮನೆಯೊಳಗಿಂದ ನೋಡಿದರೆ ಅವು ಎರಡು ಪಟ್ಟು ದೊಡ್ದ
ಟಿ.ವಿ.ಯ ಚಪ್ಪಟೆ ಸ್ಕ್ರೀನಿನಂತೆ ಕಾಣಿಸುತ್ತವೆ. ಮುಂದೊಂದು ದಿನ ಮನೆಯೊಳಗೆ ನಿಮ್ಮ ಸ್ವಂತ
ಸ್ಯಾಟ್ ಲೈಟ್ ಲಿಂಕ್, ನಿಮ್ಮ ಮನರಂಜನೆ, ವಿಜ್ಞಾನ ಹಾಗೂ ಸುದ್ದಿ ಸಮಾಚಾರವನ್ನು
ಸಾದರಪಡಿಸುತ್ತದೆ. ಈಗ ಆಗಿರುವ ಫೈಬರ್ ಆಪ್ಟಿಕಲ್ ಕೇಬಲ್ ಸಂಪರ್ಕಗಳಿಗೆ ಮುಂದೆ
ಮೌಲ್ಯವಿರಲಾರದು. 2020 ಸುಮಾರಿಗೆ ಟಿ.ವಿ. ಯೂ ಸಹ ಹಳೆಯ ಸರಕಾಗಬಹುದು.
ಸೋಫಾದಲ್ಲಿ ಆರಾಮಾಗಿ ಮಲಗಿಕೊಂಡು ನಿಮ್ಮ ನೆಚ್ಚಿನ ತಾರೆಗಳ ಕಾರ್ಯಕ್ರಮಗಳನ್ನು 3D
ಹಲೋಗ್ರಾಂಮ್ ತಾಂತ್ರಿಕತೆಯ ಮೂಲಕ ವೀಕ್ಷಿಸಬಹುದು.

೦೦೦

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...