Home / ಲೇಖನ / ವಿಜ್ಞಾನ / ನಿಬ್ಬೆರಗಿನ ನಿವಾಸಿಗಳು !!

ನಿಬ್ಬೆರಗಿನ ನಿವಾಸಿಗಳು !!

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ
ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು
ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ
ಸೆನ್ಸಾರ್‌ಗಳಿಂದ ಮುಖವನ್ನು ಅಥವಾ ಕಣ್ಣಿನ ಐರಸ್ ಅನ್ನು ಪರೀಕ್ಷೆ ಮಾಡಿ ಗುರ್ತನ್ನು
ಖಚಿತಗೊಳಿಸಿಕೊಂಡು ಸ್ವಯಂ ಚಾಲಿತವಾಗಿ ಬಾಗಿಲುಗಳು ತಮ್ಮಿಂದ ತಾವೇ
ತೆರೆದುಕೊಳ್ಳುತ್ತವೆ. ಈ ತಂತ್ರಜ್ಞಾನ ಮುಂದೊಂದು ದಿನ ಬರಲಿದೆ, ಎಂದು ವಿಜ್ಞಾನಿಗಳ
ವ್ಯಾಖ್ಯಾನವಾಗಿದೆ. ಇದರಂತೆ ಆಹಾರ ಪದಾರ್ಥಗಳ ಅವಶ್ಯಕತೆಯನ್ನು”ರೆಫ್ರಿಜಿರೇಟರ್’ಗಳು
ಗುರುತಿಸುತ್ತವೆ. ಭವಿಷ್ಯದಲ್ಲಿ ತಂಗಳು ಪೆಟ್ಟಿಗೆಯಲ್ಲಿ ತರಕಾರಿ ಮುಗಿದು ಹೋದಾಗ ಆದು
ತನ್ನಿಂದ ತಾನೆ ಸ್ವಯಂಚಾಲಿತಗೊಂಡು ತರಕಾರಿ ಮಾರ್ಕೆಟ್ಟಿಗೆ ಸಂದೇಶವನ್ನು ರವಾನಿಸುತ್ತವೆ.
ಮೈಕ್ರೋ ಓವನ್ ಆಹಾರ ಪದಾರ್ಥಗಳ ತಯಾರಿಕೆಯನ್ನು ಪರಿಶೀಲಿಸುತ್ತದೆ.
ವಾಷಿಂಗ್‌ಮಿಷನ್ ಕೂಡ ತನಗೆ ಬೇಕಾದ ಡಿಟರ್ಜಂಟ್ ಫಾಬ್ರಿಕ್ ಸಾಫ್ಟ್‌ನರ್‌ಗಳನ್ನೂ
ಅಂಗಡಿಯಿಂದ ತರಿಸಿಕೊಳ್ಳುವ ಏರ್ಪಾಡು ಮಾಡುತ್ತದೆ.

ಮನೆಯ ಕಿಟಕಿಗಳಲ್ಲಿಯೂ ಕೂಡ ಕ್ರಾಂತಿಕಾರಕ ಬದಲಾವಣೆಯಾಗುತ್ತದೆ.
‘ಸಾಸ್ಮಾರ್ಟ್‌ಗ್ಲಾಸ್’ ಎಂಬ ತಿರುಗುವ ರೆಕ್ಕೆಗಳು ಆಕ್ಟಿವ್ ಎಲಿಮೆಂಟ್ಸ್ ಆಗಿ
ಕಾರ್ಯನಿರ್ವಹಿಸುತ್ತವೆ. ಅಂದರೆ ಸೂರ್ಯ ಕಿರಣಗಳ ಉಷ್ಟತೆ ಮತ್ತು ಬೆಳಕಿನ ತೀವ್ರತೆಗೆ
ತಕ್ಕಂತೆ ಸ್ವಯಂ ಚಾಲನೆಗೊಂಡು ನಮಗೆ ಅಗತ್ಯವಿದ್ದಷ್ಟು ಸೂರ್ಯರಶ್ಮಿಗಳನ್ನು ಒಳಗೆ
ಬರುವಂತೆ ಏರ್ಪಾಡು ಇರುತ್ತದೆ. ಹಾಗೆಯೇ ರಾತ್ರಿ ಸಮಯದಲ್ಲಿ ನಮ್ಮ ಏಕಾಂತಕ್ಕೆ
ಭಂಗವಾಗದಂತೆ ಕಿಟಕಿಗಳೆ ಹೊಂದಾಣಿಕೆಯಾಗುತ್ತವೆ. ಹೊರಗಿನಿಂದ ನೋಡಿದರೆ ಕಿಟಕಿಗಳು
ಗಾತ್ರದಲ್ಲಿ ಚಿಕ್ಕವು ಎನಿಸಿದರೂ ಮನೆಯೊಳಗಿಂದ ನೋಡಿದರೆ ಅವು ಎರಡು ಪಟ್ಟು ದೊಡ್ದ
ಟಿ.ವಿ.ಯ ಚಪ್ಪಟೆ ಸ್ಕ್ರೀನಿನಂತೆ ಕಾಣಿಸುತ್ತವೆ. ಮುಂದೊಂದು ದಿನ ಮನೆಯೊಳಗೆ ನಿಮ್ಮ ಸ್ವಂತ
ಸ್ಯಾಟ್ ಲೈಟ್ ಲಿಂಕ್, ನಿಮ್ಮ ಮನರಂಜನೆ, ವಿಜ್ಞಾನ ಹಾಗೂ ಸುದ್ದಿ ಸಮಾಚಾರವನ್ನು
ಸಾದರಪಡಿಸುತ್ತದೆ. ಈಗ ಆಗಿರುವ ಫೈಬರ್ ಆಪ್ಟಿಕಲ್ ಕೇಬಲ್ ಸಂಪರ್ಕಗಳಿಗೆ ಮುಂದೆ
ಮೌಲ್ಯವಿರಲಾರದು. 2020 ಸುಮಾರಿಗೆ ಟಿ.ವಿ. ಯೂ ಸಹ ಹಳೆಯ ಸರಕಾಗಬಹುದು.
ಸೋಫಾದಲ್ಲಿ ಆರಾಮಾಗಿ ಮಲಗಿಕೊಂಡು ನಿಮ್ಮ ನೆಚ್ಚಿನ ತಾರೆಗಳ ಕಾರ್ಯಕ್ರಮಗಳನ್ನು 3D
ಹಲೋಗ್ರಾಂಮ್ ತಾಂತ್ರಿಕತೆಯ ಮೂಲಕ ವೀಕ್ಷಿಸಬಹುದು.

೦೦೦

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...