Home / ಲೇಖನ / ವಿಜ್ಞಾನ / ನಿಬ್ಬೆರಗಿನ ನಿವಾಸಿಗಳು !!

ನಿಬ್ಬೆರಗಿನ ನಿವಾಸಿಗಳು !!

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ
ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು
ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ
ಸೆನ್ಸಾರ್‌ಗಳಿಂದ ಮುಖವನ್ನು ಅಥವಾ ಕಣ್ಣಿನ ಐರಸ್ ಅನ್ನು ಪರೀಕ್ಷೆ ಮಾಡಿ ಗುರ್ತನ್ನು
ಖಚಿತಗೊಳಿಸಿಕೊಂಡು ಸ್ವಯಂ ಚಾಲಿತವಾಗಿ ಬಾಗಿಲುಗಳು ತಮ್ಮಿಂದ ತಾವೇ
ತೆರೆದುಕೊಳ್ಳುತ್ತವೆ. ಈ ತಂತ್ರಜ್ಞಾನ ಮುಂದೊಂದು ದಿನ ಬರಲಿದೆ, ಎಂದು ವಿಜ್ಞಾನಿಗಳ
ವ್ಯಾಖ್ಯಾನವಾಗಿದೆ. ಇದರಂತೆ ಆಹಾರ ಪದಾರ್ಥಗಳ ಅವಶ್ಯಕತೆಯನ್ನು”ರೆಫ್ರಿಜಿರೇಟರ್’ಗಳು
ಗುರುತಿಸುತ್ತವೆ. ಭವಿಷ್ಯದಲ್ಲಿ ತಂಗಳು ಪೆಟ್ಟಿಗೆಯಲ್ಲಿ ತರಕಾರಿ ಮುಗಿದು ಹೋದಾಗ ಆದು
ತನ್ನಿಂದ ತಾನೆ ಸ್ವಯಂಚಾಲಿತಗೊಂಡು ತರಕಾರಿ ಮಾರ್ಕೆಟ್ಟಿಗೆ ಸಂದೇಶವನ್ನು ರವಾನಿಸುತ್ತವೆ.
ಮೈಕ್ರೋ ಓವನ್ ಆಹಾರ ಪದಾರ್ಥಗಳ ತಯಾರಿಕೆಯನ್ನು ಪರಿಶೀಲಿಸುತ್ತದೆ.
ವಾಷಿಂಗ್‌ಮಿಷನ್ ಕೂಡ ತನಗೆ ಬೇಕಾದ ಡಿಟರ್ಜಂಟ್ ಫಾಬ್ರಿಕ್ ಸಾಫ್ಟ್‌ನರ್‌ಗಳನ್ನೂ
ಅಂಗಡಿಯಿಂದ ತರಿಸಿಕೊಳ್ಳುವ ಏರ್ಪಾಡು ಮಾಡುತ್ತದೆ.

ಮನೆಯ ಕಿಟಕಿಗಳಲ್ಲಿಯೂ ಕೂಡ ಕ್ರಾಂತಿಕಾರಕ ಬದಲಾವಣೆಯಾಗುತ್ತದೆ.
‘ಸಾಸ್ಮಾರ್ಟ್‌ಗ್ಲಾಸ್’ ಎಂಬ ತಿರುಗುವ ರೆಕ್ಕೆಗಳು ಆಕ್ಟಿವ್ ಎಲಿಮೆಂಟ್ಸ್ ಆಗಿ
ಕಾರ್ಯನಿರ್ವಹಿಸುತ್ತವೆ. ಅಂದರೆ ಸೂರ್ಯ ಕಿರಣಗಳ ಉಷ್ಟತೆ ಮತ್ತು ಬೆಳಕಿನ ತೀವ್ರತೆಗೆ
ತಕ್ಕಂತೆ ಸ್ವಯಂ ಚಾಲನೆಗೊಂಡು ನಮಗೆ ಅಗತ್ಯವಿದ್ದಷ್ಟು ಸೂರ್ಯರಶ್ಮಿಗಳನ್ನು ಒಳಗೆ
ಬರುವಂತೆ ಏರ್ಪಾಡು ಇರುತ್ತದೆ. ಹಾಗೆಯೇ ರಾತ್ರಿ ಸಮಯದಲ್ಲಿ ನಮ್ಮ ಏಕಾಂತಕ್ಕೆ
ಭಂಗವಾಗದಂತೆ ಕಿಟಕಿಗಳೆ ಹೊಂದಾಣಿಕೆಯಾಗುತ್ತವೆ. ಹೊರಗಿನಿಂದ ನೋಡಿದರೆ ಕಿಟಕಿಗಳು
ಗಾತ್ರದಲ್ಲಿ ಚಿಕ್ಕವು ಎನಿಸಿದರೂ ಮನೆಯೊಳಗಿಂದ ನೋಡಿದರೆ ಅವು ಎರಡು ಪಟ್ಟು ದೊಡ್ದ
ಟಿ.ವಿ.ಯ ಚಪ್ಪಟೆ ಸ್ಕ್ರೀನಿನಂತೆ ಕಾಣಿಸುತ್ತವೆ. ಮುಂದೊಂದು ದಿನ ಮನೆಯೊಳಗೆ ನಿಮ್ಮ ಸ್ವಂತ
ಸ್ಯಾಟ್ ಲೈಟ್ ಲಿಂಕ್, ನಿಮ್ಮ ಮನರಂಜನೆ, ವಿಜ್ಞಾನ ಹಾಗೂ ಸುದ್ದಿ ಸಮಾಚಾರವನ್ನು
ಸಾದರಪಡಿಸುತ್ತದೆ. ಈಗ ಆಗಿರುವ ಫೈಬರ್ ಆಪ್ಟಿಕಲ್ ಕೇಬಲ್ ಸಂಪರ್ಕಗಳಿಗೆ ಮುಂದೆ
ಮೌಲ್ಯವಿರಲಾರದು. 2020 ಸುಮಾರಿಗೆ ಟಿ.ವಿ. ಯೂ ಸಹ ಹಳೆಯ ಸರಕಾಗಬಹುದು.
ಸೋಫಾದಲ್ಲಿ ಆರಾಮಾಗಿ ಮಲಗಿಕೊಂಡು ನಿಮ್ಮ ನೆಚ್ಚಿನ ತಾರೆಗಳ ಕಾರ್ಯಕ್ರಮಗಳನ್ನು 3D
ಹಲೋಗ್ರಾಂಮ್ ತಾಂತ್ರಿಕತೆಯ ಮೂಲಕ ವೀಕ್ಷಿಸಬಹುದು.

೦೦೦

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...