Home / ಲೇಖನ / ನಗೆ ಹನಿ / ನಗೆಡಂಗುರ-೧೨೫

ನಗೆಡಂಗುರ-೧೨೫

ಪಂಡಿತ ಮದನ ಮೋಹನ ಮಾಳವೀಯರದ್ದು ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬಹುದೊಡ್ಡ ಹೆಸರು ಒಂದು ದಿನ ಅವರು ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದಾಗ ತಮ್ಮಭಾರಿ ಮೀಸೆಯನ್ನೂ ಸಹ ಬೋಳಿಸಿಕೊಂಡರು ಹೊರಗಡೆ ಸಂಚಾರ ಹೊರಟಾಗ ಎದುರಾದ ಸ್ನೇಹಿತರೂಬ್ಬರು ಇವರನ್ನು ಕಂಡು “ಇದೇನು ತಮ್ಮಮೀಸೆಯನ್ನೂ ಇಂದು ಬೋಳಿಸಿ ಕೊಂಡಿರುವಿರಲ್ಲಾ ಏಕೆಂದು ಕೇಳಬಹುದೆ? ಅದು ಇದ್ದಿದ್ದರೆ ನಿಮಗೇನು ತೊಂದರೆಯಾಗಿರುತ್ತಿತ್ತು?” ಕೇಳಿದರು ಆ ಮಿತ್ರ. ಅದಕ್ಕೆ ಮಾಳವೀಯರ ಉತ್ತರ ಸಿದ್ದವಾಗಿತ್ತು. “ಇದಕ್ಕೆ ಕಾರಣ ಇಷ್ಟೆ; ನಮ್ಮ ಭರತ ಭೂಮಿಯಲ್ಲಿ ಎಲ್ಲ ಸಹೋದರರು ಪಡಬಾರದ ಕಷ್ಟವನ್ನು ಅನುಭವಿಸುತ್ತಿರುವಾಗ ಅವರಿಗೆ ಯಾವ ಸಹಾಯವನ್ನು ಮಾಡಲಾಗದಿರುವ ಈ ಪುರುಷತ್ವದ ಮೀಸೆ ಏತಕ್ಕಾಗಿ ಬೇಕು? ಅದಕ್ಕಾಗಿ ನಾನು ನನ್ನ ಮೀಸೆಯನ್ನು ಬೋಳಿಸಿದ್ದೇನೆ” ಎಂದರು ಮಾಳವೀಯರು.
***

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...