Home / ಕವನ / ಕವಿತೆ / ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ           || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ               || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ            || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ           || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ           || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ            || ೫ ||
***

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...