ಎಲ್ಲಿಗೆ ಕರೆದೊಯ್ಯುವೆ ನೀ?

ಎಲ್ಲಿಗೆ ಕರೆದೊಯ್ಯುವೆ ನೀ
ಹೇಳು ಕನ್ನಯ್ಯಾ?
ಬ್ಬಂದಾವನ ಬೀದಿಗಳಲಿ
ಹೂ ಚೆಲ್ಲಿದ ಹಾದಿಗಳಲಿ
ಎಳೆದೊಯ್ಯುವೆ ಎಲ್ಲಿಗೆ
ಹೇಳು ಕನ್ನಯ್ಯಾ?

ಮಡಕೆ ಒಡೆದು ಮೊಸರ ಕುಡಿದೆ
ನನ್ನ ಭಂಗಿಸಿ!
ಬೆಣ್ಣೆ ಸವಿದು ನಡೆದೆ ಪುಂಡ
ನನ್ನ ನಂಬಿಸಿ
ಮೋಡಿ ಮಾಡಿ ಕೂಡಿ ಮುಂದೆ
ಎಲ್ಲಿ ಹೋದೆಯೋ?
ಅರಿಯದಂಥ ಹಾದಿಗೆಳೆದು
ಹೇಗೆ ತೊರೆದೆಯೋ?

ನಂಬಿ ಬಂದ ಹೆಣ್ಣ ಭಂಡ
ಹಾಗೆ ತೊರೆವುದೇ?
ಎಂದೋ ನೆನಪು ಬಂದು ಹೀಗೆ
ಒಮ್ಮೆ ಬರುವುದೇ?
ನಾನು ಮಾತ್ರ ನಿನ್ನ ನೆನದೇ
ಬಾಳುತಿರುವೆನೋ,
ನೀನಿಲ್ಲದೆ ಗಿರಿಧಾರಿ
ಹೇಗೆ ಉಳಿವೆನೋ?
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೨೬
Next post ಬರಲಿವೆ ಚಾಲಕನಿಲ್ಲದ ವಿಮಾನಗಳು !?

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…