ಎಲ್ಲಿಗೆ ಕರೆದೊಯ್ಯುವೆ ನೀ?

ಎಲ್ಲಿಗೆ ಕರೆದೊಯ್ಯುವೆ ನೀ
ಹೇಳು ಕನ್ನಯ್ಯಾ?
ಬ್ಬಂದಾವನ ಬೀದಿಗಳಲಿ
ಹೂ ಚೆಲ್ಲಿದ ಹಾದಿಗಳಲಿ
ಎಳೆದೊಯ್ಯುವೆ ಎಲ್ಲಿಗೆ
ಹೇಳು ಕನ್ನಯ್ಯಾ?

ಮಡಕೆ ಒಡೆದು ಮೊಸರ ಕುಡಿದೆ
ನನ್ನ ಭಂಗಿಸಿ!
ಬೆಣ್ಣೆ ಸವಿದು ನಡೆದೆ ಪುಂಡ
ನನ್ನ ನಂಬಿಸಿ
ಮೋಡಿ ಮಾಡಿ ಕೂಡಿ ಮುಂದೆ
ಎಲ್ಲಿ ಹೋದೆಯೋ?
ಅರಿಯದಂಥ ಹಾದಿಗೆಳೆದು
ಹೇಗೆ ತೊರೆದೆಯೋ?

ನಂಬಿ ಬಂದ ಹೆಣ್ಣ ಭಂಡ
ಹಾಗೆ ತೊರೆವುದೇ?
ಎಂದೋ ನೆನಪು ಬಂದು ಹೀಗೆ
ಒಮ್ಮೆ ಬರುವುದೇ?
ನಾನು ಮಾತ್ರ ನಿನ್ನ ನೆನದೇ
ಬಾಳುತಿರುವೆನೋ,
ನೀನಿಲ್ಲದೆ ಗಿರಿಧಾರಿ
ಹೇಗೆ ಉಳಿವೆನೋ?
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೨೬
Next post ಬರಲಿವೆ ಚಾಲಕನಿಲ್ಲದ ವಿಮಾನಗಳು !?

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…