ಪ್ರಿಯತಮನಿಲ್ಲದೆ ಮಬ್ಬಾಗಿದೆ

ಪ್ರಿಯತಮನಿಲ್ಲದೆ ಮಬ್ಬಾಗಿದೆ ಮನ
ಎಂಥ ಹಬ್ಬವೆ ಹೇಳು ಸಖಿ?
ಇದೆಂಥ ಹಬ್ಬವೇ ಹೇಳು ಸಖಿ.

ಮನ್ಮಥದೇವನ ಹೋಳಿಯುತ್ಸವ
ಹಾಳುಸುರಿಯುತಿದೆ ಹೀಗೇಕೆ?
ಓಕುಳಿಯಾಟಕೆ ಕಳೆಯೇ ಇಲ್ಲ
ಬಿಕೋ ಎನ್ನುತಿದ ಹಸೆ ಏಕೆ?

ಬೇಯುತ್ತಿದೆ ಎದೆ ಒಂದೇ ಸಮನೆ
ಸುರಿದಿದೆ ಕಂಬನಿ ಕೆನ್ನೆಯಲಿ;
ಹರಿ ಹೊರಗಿರಲು ಬೇಕೇ ದೀಪ
ಬೆಳಕಾರಿರಲು ಚಿತ್ತದಲಿ?

ಎಂದು ಬರುವನೋ ಗೋಪಿನಂದನ
ಎಂದು ಕರೆವನೋ ಹತ್ತಿರಕೆ?
ಎಂದು ಏರುವೆನೋ ಅವನನು ಕೂಡಿ
ಆನಂದದ ಮುಗಿಲೆತ್ತರಕೆ!

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೩೧
Next post ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys