Home / ಕವನ / ಕವಿತೆ / ನನ್ನ ಶ್ಯಾಮನ ಮಂದಹಾಸ

ನನ್ನ ಶ್ಯಾಮನ ಮಂದಹಾಸ

ನನ್ನ ಶ್ಯಾಮನ ಮಂದಹಾಸ ಮಿಂಚುವ ಮುಖ
ಕಾಡುವುದೆ ಸಖಿ ನನ್ನ ಇರುಳಿನಲ್ಲಿ,
ಕುಡಿನೋಟ ಚಿಮ್ಮುವಾ ಬಾಣಗಳು ಎದೆ ತಾಗಿ
ಹೊರಳುವೆನು ನಾ ಮಧುರ ನೋವಿನಲ್ಲಿ.

ಕರಯುವಳು ನನ್ನ ಸಖಿ “ಬಾರೆ ಮಿರಾ ಬಾರೆ
ಕಟ್ಟಲೇನೇ ಕೈಗೆ ತಾಯಿತವನು?
ಬೇರು ಮೂಲಿಕೆ ತಂದು ಔಷಧವ ಅರೆಯಲೇ
ವಾಸಿಮಾಡಲೆ ನಿನ್ನ ಬಾಧೆಯನ್ನು?”

ಮದ್ದು ತಾಯಿತಗಳಿಗೆ ಮಣಿವ ರೋಗವಿದಲ್ಲ,
ಮನವ ಹೊಕ್ಕಿದ ಹರಿಯ ಮಧುರ ರೂಪ;
ನನ್ನ ಉಳಿಸುವುದಿಗ ಒಂದೇ ಔಷಧ ಸಖೀ
ಹರಿಯ ಕಾಣದೆ ಮಾಯದನ್ನ ತಾಪ.

ಬಾ ಸಖೀ ಬಾ ನನ್ನ ಎದೆಯಿಣುಕಿ ನೋಡು,
ಕಂಡೀತು ನೂರುಚೂರಾದ ಹೃದಯ;
ಮನ್ಮಥನ ನಾಚಿಸುವ ಚೆಲುವನೇ ಗಿರಿಧರ,
ಹೇಗಿರಲೆ ದೂರವಿರೆ ಅಂಥ ಇನಿಯ?

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...