ಹೇಗೆ ಹೋದನೇ ಹರಿ?

ಹೇಗೆ ಹೋದನೇ ಹರಿ ನಮ್ಮನೆಲ್ಲ ತೊರೆದು
ಹೇಗೆ ಹೋದ ಮಧುರೆಗೆ ನಮ್ಮೆದೆಯನು ಇರಿದು?

ಮಾಯೆಯನ್ನು ಹರಡುತಿದ್ದ
ಮುರಳಿಯನ್ನು ತ್ಯಜಿಸಿ
ಮೈಗೆ ಒರಗಿ ನಿಲ್ಲುತಿದ್ದ
ಸುರಭಿ ಹಿಂಡ ಸರಿಸಿ
ನಂದಗೋಪಿ ಬಂಧು ಬಳಗ ಎಲ್ಲರ ಹುಸಿ ಮಾಡಿ
ಹೋದನಲ್ಲ ಕೊನೆಗೂ ಮಧುರೆಯ ರಥವೇರಿ

ಪ್ರತಿ ಇರುಳೂ ಬೀಸುವುದು
ಚೀರುಲಿ ಥರ ಗಾಳಿ
ಹಸು ಕರುಗಳ ಕಣ್ಣಲ್ಲಿ
ಹಳೆ ನೆನಪಿನ ಧಾಳಿ
ಮುಸು ಮುಸು ಅಳುವಂತೆ ದಡವ ನೂಕಿ ನಡೆವ ಯಮುನೆ
ಗೋಕುಲದ ಗೋಳಿಗೀಗ ನರಕದ ವ್ಯಥೆ ಸಮನೆ?

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೩೫
Next post ‘ಏಡ್ಸ್‌’ ಮಾರಿಗೆ ‘ವನೌಷಧಿ’ಯ ರಾಮಾಬಾಣ !!

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…