ಈಗಷ್ಟೆ ಮುಗಿದಿದೆ ಉರಿಬೇಸಿಗೆ

ಈಗಷ್ಟೆ ಮುಗಿದಿದೆ ಉರಿಬೇಸಿಗೆ
ಸೀದುಹೋಗಿದೆ ನೆಲ ಅದರ ಧಗೆಗೆ
ಮೇಲೆ ತೇಲುವ ಮುಗಿಲು
ಕೆಳಗೆ ಥಣ್ಣಗೆ ಸುರಿದು
ತನ್ನ ಉಳಿಸುವುದೆಂದು ಧರೆ ನಂಬಿದೆ
ಹಾಗೇ ನಾನೂ ನಿನಗೆ ಕಾಯುತಿರುವೆ.

ತಾಗಿತೋ ಹೇಗೆ ಈ ನೆಲದ ವಿರಹ?
ಬಾನಲ್ಲಿ ಮೂಡುತಿದೆ ಮಳೆಯ ಬರೆಹ!
ಕರಿಯ ಗಿರಿಗಳ ದಂಡು
ಓಡಿ ಬರುವುದ ಕಂಡು
ನಾಚಿ ಕೆಂಪಾಗಿದೆ ನೆಲದ ಮೋರೆ
ಹಾರುತಿದೆ ಗಾಳಿಗ ಉಟ್ಟ ಸೀರೆ!

ತುಂಬಿ ಹರಿದಿದೆ ನದಿ ದಡಕೆ ತುಡಿದು
ಅಪ್ಪಿಕೊಳುತಿದೆ ಬಾಚಿ ಒಲವ ನುಡಿದು
ಹೂಗೊಂಚಲನು ನೀಡಿ
ಗಾಳಿ ತಂದಿದೆ ಗಂಧ
ತಬ್ಬೋ ಗಿರಿಧರ ಬಂದು ಒಳಗಿನಿಂದ
ಉಸಿರುಗಟ್ಟಿಸು ನಿನ್ನ ಬಿಗಿತದಿಂದ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೩೯
Next post ಹೊಗೆ ಇಲ್ಲದ ವಿದ್ಯುತ್ ಕಾರು ರೆವಾ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys