ಬೆಳಗಾಗಿದೆ ಮೇಲೇಳೋ ಕೃಷ್ಣಾ

ಬೆಳಗಾಗಿದೆ ಮೆಲೇಳು ಕೃಷ್ಣಾ
ಬಿಸಿಲಿಣುಕಿದೆ ಮೇಲೇಳು
ತೆರೆದಿದೆ ಮನೆಗಳ ಬಾಗಿಲು – ಹಸು ಕರು
ಆಂಭಾ ಎನುತಿದೆ ಏಳು

ಕೇಳಿಸದೇನೋ ಮೊಸರನು ಕಡೆಯುವ
ಗೋಪೀ ಕೈಬಳೆ ಸದ್ದು,
ಆಗಲೆ ಬಾಗಿಲ ಬಳಿಯಲಿ ಗೆಳೆಯರು
ಆಟಕೆ ಹೋಗಲು ಕದ್ದು!

ಮರಗಿಡಬಳ್ಳಿ ಓಲಾಡುತ್ತಿವೆ
ಕಮ್ಮನೆ ಗಾಳಿಯ ಹೀರಿ
ಬರುವನಿನ್ನೇನು ಕ್ಳಷ್ಣ ಎಂದು
ಖುಷಿಯಲಿ ತಲೆಗಳ ತೂಗಿ

ಆ ಕಡೆ ಈ ಕಡೆ ಜಿಗಿದಿವೆ ಕರುಗಳು
ಕೊರಳಿನ ಗಂಟೆ ದನಿಸಿ
ಈಗ ಬರುವ ಹರಿ ಎಂದು – ಹೊರ
ಗೋಡಲು ಬಾಲವ ಕುಣಿಸಿ

ಏಳೋ ಕ್ಟಷ್ಣ ಬೇಗೇಳೋ ಲೋಕವೆ
ಕಾದಿದೆ ನಿನ್ನನು ಕಾಣಲು
ಕಾತರಿಸಿವೆ ಜಡ ಜಂಗಮ ಮೀರಾ
ಗಿರಿಧರನನ್ನು ಕೂಡಲು

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೪೧
Next post ಗಾಜಿಗಿಂತಲೂ ಹಗುರವಾದ ಪೆಕ್ಸಿಗ್ಲಾಸ್

ಸಣ್ಣ ಕತೆ

  • ರಾಜಕೀಯ ಮುಖಂಡರು

    ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…