ಬಾರೇ ನೀರೆ ತೋರೇ ಮುಖ

ಬಾರೇ ನೀರೆ ತೋರೇ ಮುಖ ವಾರಿಗ್ಯಾಕೆ ನಿಂತೆ
ದೂರ ಹೋದಳೆಂದು ನಾ ದಾರಿ ನೋಡುತ ಕುಂತೆ ||ಪ||

ಆರಮುಂದೆ ಹೇಳಿದರೆ ತೀರದೀ ಮಾತು
ಊರಮಂದಿ ಅರಿಯರು ನಮ್ಮ ನಿಮ್ಮ ಗೊತ್ತು
ಬರತೀನಂತಾ ಹೇಳಿಹೋದೆಲ್ಲೆ ಮರೆತು ಮನ
ಕಲ್ಲು ಮಾಡಿದರೇನು ಬಂತು ||ಆ. ಪ.||

ಸಣ್ಣಾಕಿ ಇರುತಾ ನಾವು ನೀವು ಜತ್ತು
ಕಣ್ಣಿಟ್ಟು ಕಾಡುವುದೇನಿದು ಮಾತು
ಹುಣ್ಣವಿ ದಿವಸ ಅಮವಾಸಿ ಬಂತು
ಹಣ್ಣಾಗಿ ಉದರುವ ಬಳ್ಳಿ ಹಬ್ಬಿತ್ತು
ಇನ್ನ್ಯಾಕ ಕರುಣಾಗುಣವು ಇರಲಿ ಸ್ಥೂಲದ
ಹರವಿ ಸುಖದಲಿ ಹೊತ್ತು ||೧||

ವಸುಧಿಯೊಳು ಶಿಶುನಾಳಧೀಶನ ಹೊರತು
ಮುಸುಕು ತೆಗೆದು ನೋಡೆ ಮಾಯೆ ಬಲವಾಯ್ತು
ಹಸನಾದ ಹಾಲಿನ ಕೆನಿಯು ನೀರಾಯ್ತು
ವ್ಯಸನವೆಂಬೊ ಮಜ್ಜಿಗಿ ಹುಳಿಯಾಯ್ತು
ದೆಸೆ ದೆಸೆಗಳಗೆ ಅಕ್ಷತೆ ಇಟ್ಟು ಮೋಹವ
ತೊಟ್ಟು ಬಂದೆ ನಾ ಸೋತು ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇದು ಏನು ಸೋಜಿಗವೇ ಮಾನಿನಿಯಾಗಿ
Next post ಬಾರದಿರುವೆರೇನೇ ಭಾಮಿನಿ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys