ಹರಿಯುವ ನೀರಿನ ತರ ಈ ಬಾಳು

ಹರಿಯುವ ನೀರಿನ ತರ ಈ ಬಾಳು
ಸರಿದು ಹೋಯಿತೇ!
ನಾರಿಯಾಗಿ ನಾ ಪಡೆದದ್ದೆಲ್ಲಾ
ವ್ಯರ್ಥವಾಯಿತೇ!
ಒಂದೆ ಗಳಿಗೆ ಕಣ್ಣೀರ ತೇವಕೆ
ಹಮ್ಮು ಆರಿತೇ,
ನೋವಿನ ದನಿ ವಸಂತನ ಮುಖದ
ಗೆಲುವ ಅಳಿಸಿತೇ!

ಕಂಬನಿ ಸೂಸುವ ಇಂಥ ಚೈತ್ರನ
ಕಾಣಲಿಲ್ಲ ಎಂದೂ
ಅಗಲಿದ ವ್ಯಥೆಗೆ ಬಣ್ಣ ಬಲಿದಿದೆ
ಕೆಂಪು ಚಿಗುರು ಬಂದು

ಉರಿವೈಶಾಖದ ಹಾಗೆ ಹಿಂದೆ
ಸುಡುತಲಿತ್ತು ಬಾಳು
ಆಷಾಢದ ಆಗಮನದ ಸನ್ನೆಗೆ
ಆರಿಹೋಯ್ತು ಗೋಳು

ಮನದ ಬಾಗಿಲಲಿ ಮಲ್ಲಿಗೆ ಬಳ್ಳಿ
ನಕ್ಕಿತು ಹಸಿರಲೆ ತಾಳಿ
ಹಗಲು ಇರುಳೂ ರೆಪ್ಪೆ ಬಡಿಯದೆ
ಕಾದಿಹೆ ಯಾರದೊ ದಾರಿ

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ-೧೫೬
Next post ಭೂಕಂಪನಕ್ಕೆ ಮುನ್ನೆಚ್ಚರಿಕೆ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…