ಹರಿಯುವ ನೀರಿನ ತರ ಈ ಬಾಳು

ಹರಿಯುವ ನೀರಿನ ತರ ಈ ಬಾಳು
ಸರಿದು ಹೋಯಿತೇ!
ನಾರಿಯಾಗಿ ನಾ ಪಡೆದದ್ದೆಲ್ಲಾ
ವ್ಯರ್ಥವಾಯಿತೇ!
ಒಂದೆ ಗಳಿಗೆ ಕಣ್ಣೀರ ತೇವಕೆ
ಹಮ್ಮು ಆರಿತೇ,
ನೋವಿನ ದನಿ ವಸಂತನ ಮುಖದ
ಗೆಲುವ ಅಳಿಸಿತೇ!

ಕಂಬನಿ ಸೂಸುವ ಇಂಥ ಚೈತ್ರನ
ಕಾಣಲಿಲ್ಲ ಎಂದೂ
ಅಗಲಿದ ವ್ಯಥೆಗೆ ಬಣ್ಣ ಬಲಿದಿದೆ
ಕೆಂಪು ಚಿಗುರು ಬಂದು

ಉರಿವೈಶಾಖದ ಹಾಗೆ ಹಿಂದೆ
ಸುಡುತಲಿತ್ತು ಬಾಳು
ಆಷಾಢದ ಆಗಮನದ ಸನ್ನೆಗೆ
ಆರಿಹೋಯ್ತು ಗೋಳು

ಮನದ ಬಾಗಿಲಲಿ ಮಲ್ಲಿಗೆ ಬಳ್ಳಿ
ನಕ್ಕಿತು ಹಸಿರಲೆ ತಾಳಿ
ಹಗಲು ಇರುಳೂ ರೆಪ್ಪೆ ಬಡಿಯದೆ
ಕಾದಿಹೆ ಯಾರದೊ ದಾರಿ

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ-೧೫೬
Next post ಭೂಕಂಪನಕ್ಕೆ ಮುನ್ನೆಚ್ಚರಿಕೆ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys