ಎರಗಿ ಬಿನ್ನಾ ಮಾಡದ್ಹೋದರು

ಎರಗಿ ಬಿನ್ನಾ ಮಾಡದ್ಹೋದರು
ಗುರುವರನ ಗಣರಿಗೆರಗಿ
ಬಿನ್ನಾ ಮಾಡದ್ಹೋದರು
ನರಗುರಿಗಳು ಪರಿಹಾಸ್ಯದಿ
ಜರಿದರು ಎನ್ನ ಕರೆಸಿದರೈ
ಹರನ ಶಾಸ್ತ್ರಕೆ ವರಪ್ರಸ್ತಕೆ
ಮರಿತರು ನಿಮಗರಿಕಿರಲೈ ||ಪ||

ಹಿಂದಕ್ಕೊಮ್ಮೆ ಪ್ರಥಮರೊಡನೆ
ದ್ವಂದ್ವ ಬಯಸಿ ರೇಚಿತಂದೆ
ಒಂದು ಕರಿಯ ಎಲಿಯ ಕೊಟ್ಟ
ಇಂದು ಪಥಕೆ ಮುಟ್ಟಲಿಲ್ಲಾ
ಅಂದಿನ ಕಥೆ ಇಂದರಿಯದೆ
ಬಂಧನಕ್ಕೊಳಗಾಗುವರೆ
ಕುಂದಿಟ್ಟರು ನಿಂದಿಸುತಲಿ
ಮಂದಾತ್ಮರು ಮಹಾಗರ್ವದಿ ||೧||

ನಿಷ್ಟಿ ಹಿಡಿದು ನಿಜಗ ನಿಲ್ಲದೆ
ಇಷ್ಟಲಿಂಗದ ಅರವು ಇಲ್ಲದೆ
ಶ್ರೇಷ್ಟ ಭಲಾ ಶಿವ ಜಂಗಮ-
ರಿಷ್ಟು ಬಳಲಿಸಿರುವರಿವರು
ಕೆಟ್ಟರು ಕುಚೇಷ್ಟರು
ಬ್ರಷ್ಟರು ಮಹಾಗರ್ವಿಷ್ಟರು
ತಟ್ಟಲೀ ಪಾಪ ಅವರಿಗೆ
ಕುಟ್ಟಲೀ ಶಿವಾ ಕುಟ್ಟಲೀಗ ||೨||

ಪೃಥ್ವಿಪಾಲ ಶಿಶುವಿನಾಳ
ಸತ್ಯಶರಣ ಸಖನ
ಕೃತ್ಯ ಕಪಟ ಬಯಸಿದವರು
ಕತ್ತಿ ಜನ್ಮಕೆ ಹೋಗುತಿಹರು ಚಿತ್ತೈಸಿರಿ
ಅರ್ತಿಯಲಿ ಚಿತ್ತೈಸಿರಿ ಇದನರಿತು
ಮತ್ತೆ ಕಳಸದ ಗ್ರಾಮಕೆ
ಪ್ರಸ್ತವಾಯಿತೋ ಭಕ್ತಿಯಲಿ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರದಿರುವೆರೇನೇ ಭಾಮಿನಿ
Next post ತೋಟವ ನೋಡಿರಯ್ಯಾ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys