ತೋಟವ ನೋಡಿರಯ್ಯಾ

ತೋಟವ ನೋಡಿರಯ್ಯಾ ಸದ್ಗುರುವಿನ
ಆಟವ ನೋಡಿರಯ್ಯಾ || ಪ ||

ನೀಟಗೂಡಿ ನಿಜ ಬ್ರಹ್ಮಜ್ಞಾನದಿ
ಕೋಟಿ ಕರ್ಮ ಸಂಹರಿಸಿದ ಧರ್ಮವ ||ಅ.ಪ.||

ಬೈಲೊಳು ಬೈಲಾಗಿ ಕವಲಿಲ್ಲದ
ಮೂಲ ಸಹಿತವಾಗಿ
ಜೋಲುವ ಫಲಗಳು ಗಾಳಿಗೆ ಒಲಿಯಲು
ಸಾಲು ಸಾಲಿನ ಮೇಲೆನಿಸುವವರ ||೧||

ಭೂಮಿಯೊಳಧಿಕವಾದ ಎಲವಿಗಿಯೆಂಬ
ನಾಮದಿಂದಿಹ ಗ್ರಾಮದಾ
ರಾಮಜೋಗಿಯು ತಾನು ಪ್ರೇಮದಿ ಬೆಳಸಿದ
ಕೋಮಲ ವನದೋಳು ರಾಮನು ನೆಲಸಿದ ||೨||

ಅಡಿಕಿ ತೆಂಗಿನ ಫಲವು
ಬಳಿಕ್ಯಾಡುವ ಬಾಳೀದಿಂಡಿನ ಛಲವೂ
ಕಡಿಕಿನಿಂ ಶಿಶುನಾಳ ಒಡಿಯ ನಿರ್ಮಿಸಿದಂಥಾ
ಅಡಿಪ್ರಾಸ ಹೊಂದಿದ ಕಡು ಚಲ್ವ ಪದವೆಂಬ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಗಿ ಬಿನ್ನಾ ಮಾಡದ್ಹೋದರು
Next post ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys