Home / ಕವನ / ಕವಿತೆ / ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ ||ಪ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ ||ಅ. ಪ.||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬಾರೆ ಪ್ಯಾಟಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಅನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಭಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ರ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ ||೩||

ಊರ ಹೊರಗೆ ಉತ್ರ ದಿಶೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೋಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ ||೪||

ಮಂಡಲಾಗ್ರ ಮಧ್ಯನಾಡಿನೋಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ ||೫||

****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...