Home / ಕವನ / ಕವಿತೆ / ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ ||ಪ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ ||ಅ. ಪ.||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬಾರೆ ಪ್ಯಾಟಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಅನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಭಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ರ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ ||೩||

ಊರ ಹೊರಗೆ ಉತ್ರ ದಿಶೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೋಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ ||೪||

ಮಂಡಲಾಗ್ರ ಮಧ್ಯನಾಡಿನೋಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ ||೫||

****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...