Home / ಕವನ / ಕವಿತೆ / ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ ||ಪ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ ||ಅ. ಪ.||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬಾರೆ ಪ್ಯಾಟಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಅನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಭಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ರ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ ||೩||

ಊರ ಹೊರಗೆ ಉತ್ರ ದಿಶೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೋಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ ||೪||

ಮಂಡಲಾಗ್ರ ಮಧ್ಯನಾಡಿನೋಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ ||೫||

****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...