ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ ||ಪ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ ||ಅ. ಪ.||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬಾರೆ ಪ್ಯಾಟಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಅನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಭಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ರ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ ||೩||

ಊರ ಹೊರಗೆ ಉತ್ರ ದಿಶೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೋಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ ||೪||

ಮಂಡಲಾಗ್ರ ಮಧ್ಯನಾಡಿನೋಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ ||೫||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೋಟವ ನೋಡಿರಯ್ಯಾ
Next post ಜೀ… ಗಾಂಧೀ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…