Home / ಕವನ / ಕವಿತೆ / ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ ||ಪ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ ||ಅ. ಪ.||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬಾರೆ ಪ್ಯಾಟಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಅನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಭಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ರ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ ||೩||

ಊರ ಹೊರಗೆ ಉತ್ರ ದಿಶೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೋಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ ||೪||

ಮಂಡಲಾಗ್ರ ಮಧ್ಯನಾಡಿನೋಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ ||೫||

****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...