Home / ಲೇಖನ / ಪ್ರವಾಸ / ಕೊನೆಯದಾಗಿ……..

ಕೊನೆಯದಾಗಿ……..

ಪ್ರವಾಸ ಸಾಹಿತ್ಯದ ಓದಿನ ಮೂಲಕ ಈ ವರೆಗೆ ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿ ಬಂದಂತಾಯ್ತು. ಪ್ರತಿಯೊಬ್ದ ಲೇಖಕರದ್ದು ವಿಭಿನ್ನ ದೃಷ್ಟಿಕೋನಗಳು. ಈ ಹಿನ್ನೆಲೆಯಲ್ಲಿ ಆಯಾ ದೇಶಗಳ ರಾಜಕೀಯ, ಸಾಮಾಜಿಕ, ಐತಿಹಾಸಿಕ, ಕಲೆ ಸಂಸ್ಕೃತಿಗಳ ಪರಿಚಯ ಮಾಡಿಕೊಂಡಂತಾಯ್ತು. ಭಾರತ ದೇಶದ ಉದ್ದಗಲ ಪ್ರವಾಸಿಸಿದ ಪ್ರವಾಸಿಗರ ಕಥನಗಳಲ್ಲಿ ನಮ್ಮ ಸಂಸ್ಕೃತಿಯ ಬಗೆಗಿನ ಹೆಚ್ಚಿನ ಪರಿಚಯ. ವಿವರಣೆಗಳಿದ್ದು ಅವುಗಳೆಲ್ಲದರ ಒಟ್ಟಾರೆಯಾದ ಚಿತ್ರಣ ನಮ್ಮ ಕಣ್ಣೆದುರಿಗೆ ಕಟ್ಟುವಂತಿವೆ. ಹಾಗೆಯೇ ವಿದೇಶ ಪ್ರವಾಸ ರಚಿಸಿದ ಹೆಚ್ಚಿನ ಲೇಖಕರು ಅಲ್ಲಿಯ ಸಮೃದ್ಧತೆಯ ಬಗೆಗೆ ಹೊಗಳಿದ್ದಾರೆ. ಸ್ವರ್ಗದ ಅನುಭವ ಪಡೆದೆವು ಎಂದೂ ಹೇಳಿಕೊಂಡಿದ್ದಾರೆ. ಆ ಸ್ವರ್ಗ ಅಲ್ಲಿಯ ವಿಜ್ಞಾನ  ತಂತ್ರಜ್ಞಾನದ ಪ್ರಗತಿಯಿಂದ ಪ್ರತಿಯೋರ್ವರನ್ನೂ ಮೂಕವಿಸ್ಮಿತರನ್ನಾಗಿ  ಮಾಡಿದೆ. ಅಷ್ಟೇ ಅಲ್ಲದೆ ಆ ಜನರ ಶಿಸ್ತು. ಸಮಯ  ವೃತ್ತಿಪರತೆ, ವಾರಾಂತ್ಯ ರಜಾದಿನಗಳನ್ನು ಸಂತೋಷವಾಗಿ ಕಳೆಯುವ ಪ್ರವೃತ್ತಿಯ ಬಗೆಗೆ ಮೆಚ್ಚಿ- ಕೊಂಡಿದ್ದಾರೆ. ಕೆಲವರು ನಮ್ಮ ದೇಶದ ರಾಜಕೀಯ, ಸಾಮಾಜಿಕ ಪರಿಸ್ಥಿತಿಗಳ ಬಗೆಗೆ ಅಲ್ಲಲ್ಲಿ ಚರ್ಚಿಸಿಕೊಳ್ಳುತ್ತ ಬಯ್ಪುಕೊಳ್ಳುತ್ತ ಬರೆದುಕೊಂಡು ಹೋದವರೂ ಇದ್ದಾರೆ. ಇರಲಿ. ಪ್ರವಾಸ ಸಾಹಿತ್ಯದ ಓದಿನಿಂದ ಒಟ್ಟಾರೆಯಾಗಿ ವಿಶ್ವದ ಅಧ್ಯಯನ ಮಾಡಲು ಸಹಾಯವಾಗುತ್ತದೆ.

ಇತ್ತೀಚಿಗೆ ಪ್ರವಾಸಕ್ಕೆ ಹೋರಡುವುದು ತೀರಾ ಸಲೀಸಾಗಿಬಿಟ್ಟಿದೆ. ಪ್ರವಾಸೋದ್ಯಮ ಇಲಾಖೆಯವರು ಜಗತ್ತಿನಾದ್ಯಂತ ಶಾಖೆಗಳನ್ನು ತೆಗೆದು ಪ್ರವಾಸಿಗರಿಗೆ ಸಾಕಷ್ಟು ಅನುಕೂಲತೆಗಳನ್ನು ಒದಗಿಸಿಕೊಡುತ್ತಿದ್ದಾರೆ. ಇಂದು ಅಮೆರಿಕೆಗೆ ಹೋಗಬೇಕೆನ್ನುವುದು ಬಹಳ ಸಹಜವಾಗಿಯೇ ನಮ್ಮ ನೆರೆಹೊರೆಯ ಊರಿಗೆ ಹೋದಂತೆಯೇ ಅಗುತ್ತಿದೆ. ಕೈ ತುಂಬಾ ಹಣ ಇರಬೇಕದ್ದೇ. ಪ್ರವಾಸಿ ಏಜೆಂಟರು ನಿಮ್ಮ ಮನೆಗೇ ಟಿಕೆಟ್ ತಂದು ಕೊಡುತ್ತಾರೆ.

ಪ್ರವಾಸ ಕೇವಲ ಮೋಜುಮಜವಾಗಿ ಮಾಡಿಕೊಂಡು ಬರಬಾರದಷ್ಟೆ. ಅವಕಾಶಗಳನ್ನು ಬಳಸಿಕೊಂಡು ಆಯಾ ದೇಶಗಳ ರೀತಿ ನೀತಿಗಳನ್ನು ಪರಿಚಯಿಸಿಕೊಳ್ಳುತ್ತ ಜ್ಞಾನಾಭಿವೃದ್ಧಿ ಮಾಡಿಕೊಂಡು ಬರಬೇಕಾದುದು ಅತೀ ಮಹತ್ವ.

ಆದರೆ ಕಂಡದ್ದನ್ನೆಲ್ದಾ ದಾಖಲಿಸಬೇಕೆನ್ನುವ ಹುಚ್ಚು ಹಿಡಿದು ಬಿಟ್ಟರೆ ಅದು ಆ ಪ್ರದೇಶದ, ದೇಶದ ಕೈಪಿಡಿಯಾಗು- ತ್ತದೆಯೇ ಹೊರತು ಮೌಲ್ಯಯುತವಾದ ಸಾಹಿತ್ಯವಾಗುವುದಿಲ್ಲ.

ಪ್ರವಾಸ ಸಾಹಿತ್ಯ ತನ್ನ ಪ್ರಯಾಸದ 120 ಮೆಟ್ಟಿಲುಗಳನ್ನೇರಿ (ವರ್ಷಗಳು) ಶಿಖರ ತಲುಪಿದ ಸಂಭ್ರಮದಲ್ಲಿದೆ. ನಮ್ಮಲ್ಲಿ ಪ್ರವಾಸಿಗರು ಲವಲವಿಕೆಯಿಂದ ವಿಶ್ವದ ನಾನಾ ಕಡೆಗೆ ಹೆಜ್ಜೆ ಮೂಡಿಸಿ ಬಂದಿದ್ದಾರೆ. ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ಧಾರೆ. ಅವರೆಲ್ಲರಿಗೂ ಮತ್ತೊಮ್ಮೆ ವಂದನೆಗಳು.

****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...