Home / ಲೇಖನ / ಪ್ರವಾಸ / ಕೊನೆಯದಾಗಿ……..

ಕೊನೆಯದಾಗಿ……..

ಪ್ರವಾಸ ಸಾಹಿತ್ಯದ ಓದಿನ ಮೂಲಕ ಈ ವರೆಗೆ ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿ ಬಂದಂತಾಯ್ತು. ಪ್ರತಿಯೊಬ್ದ ಲೇಖಕರದ್ದು ವಿಭಿನ್ನ ದೃಷ್ಟಿಕೋನಗಳು. ಈ ಹಿನ್ನೆಲೆಯಲ್ಲಿ ಆಯಾ ದೇಶಗಳ ರಾಜಕೀಯ, ಸಾಮಾಜಿಕ, ಐತಿಹಾಸಿಕ, ಕಲೆ ಸಂಸ್ಕೃತಿಗಳ ಪರಿಚಯ ಮಾಡಿಕೊಂಡಂತಾಯ್ತು. ಭಾರತ ದೇಶದ ಉದ್ದಗಲ ಪ್ರವಾಸಿಸಿದ ಪ್ರವಾಸಿಗರ ಕಥನಗಳಲ್ಲಿ ನಮ್ಮ ಸಂಸ್ಕೃತಿಯ ಬಗೆಗಿನ ಹೆಚ್ಚಿನ ಪರಿಚಯ. ವಿವರಣೆಗಳಿದ್ದು ಅವುಗಳೆಲ್ಲದರ ಒಟ್ಟಾರೆಯಾದ ಚಿತ್ರಣ ನಮ್ಮ ಕಣ್ಣೆದುರಿಗೆ ಕಟ್ಟುವಂತಿವೆ. ಹಾಗೆಯೇ ವಿದೇಶ ಪ್ರವಾಸ ರಚಿಸಿದ ಹೆಚ್ಚಿನ ಲೇಖಕರು ಅಲ್ಲಿಯ ಸಮೃದ್ಧತೆಯ ಬಗೆಗೆ ಹೊಗಳಿದ್ದಾರೆ. ಸ್ವರ್ಗದ ಅನುಭವ ಪಡೆದೆವು ಎಂದೂ ಹೇಳಿಕೊಂಡಿದ್ದಾರೆ. ಆ ಸ್ವರ್ಗ ಅಲ್ಲಿಯ ವಿಜ್ಞಾನ  ತಂತ್ರಜ್ಞಾನದ ಪ್ರಗತಿಯಿಂದ ಪ್ರತಿಯೋರ್ವರನ್ನೂ ಮೂಕವಿಸ್ಮಿತರನ್ನಾಗಿ  ಮಾಡಿದೆ. ಅಷ್ಟೇ ಅಲ್ಲದೆ ಆ ಜನರ ಶಿಸ್ತು. ಸಮಯ  ವೃತ್ತಿಪರತೆ, ವಾರಾಂತ್ಯ ರಜಾದಿನಗಳನ್ನು ಸಂತೋಷವಾಗಿ ಕಳೆಯುವ ಪ್ರವೃತ್ತಿಯ ಬಗೆಗೆ ಮೆಚ್ಚಿ- ಕೊಂಡಿದ್ದಾರೆ. ಕೆಲವರು ನಮ್ಮ ದೇಶದ ರಾಜಕೀಯ, ಸಾಮಾಜಿಕ ಪರಿಸ್ಥಿತಿಗಳ ಬಗೆಗೆ ಅಲ್ಲಲ್ಲಿ ಚರ್ಚಿಸಿಕೊಳ್ಳುತ್ತ ಬಯ್ಪುಕೊಳ್ಳುತ್ತ ಬರೆದುಕೊಂಡು ಹೋದವರೂ ಇದ್ದಾರೆ. ಇರಲಿ. ಪ್ರವಾಸ ಸಾಹಿತ್ಯದ ಓದಿನಿಂದ ಒಟ್ಟಾರೆಯಾಗಿ ವಿಶ್ವದ ಅಧ್ಯಯನ ಮಾಡಲು ಸಹಾಯವಾಗುತ್ತದೆ.

ಇತ್ತೀಚಿಗೆ ಪ್ರವಾಸಕ್ಕೆ ಹೋರಡುವುದು ತೀರಾ ಸಲೀಸಾಗಿಬಿಟ್ಟಿದೆ. ಪ್ರವಾಸೋದ್ಯಮ ಇಲಾಖೆಯವರು ಜಗತ್ತಿನಾದ್ಯಂತ ಶಾಖೆಗಳನ್ನು ತೆಗೆದು ಪ್ರವಾಸಿಗರಿಗೆ ಸಾಕಷ್ಟು ಅನುಕೂಲತೆಗಳನ್ನು ಒದಗಿಸಿಕೊಡುತ್ತಿದ್ದಾರೆ. ಇಂದು ಅಮೆರಿಕೆಗೆ ಹೋಗಬೇಕೆನ್ನುವುದು ಬಹಳ ಸಹಜವಾಗಿಯೇ ನಮ್ಮ ನೆರೆಹೊರೆಯ ಊರಿಗೆ ಹೋದಂತೆಯೇ ಅಗುತ್ತಿದೆ. ಕೈ ತುಂಬಾ ಹಣ ಇರಬೇಕದ್ದೇ. ಪ್ರವಾಸಿ ಏಜೆಂಟರು ನಿಮ್ಮ ಮನೆಗೇ ಟಿಕೆಟ್ ತಂದು ಕೊಡುತ್ತಾರೆ.

ಪ್ರವಾಸ ಕೇವಲ ಮೋಜುಮಜವಾಗಿ ಮಾಡಿಕೊಂಡು ಬರಬಾರದಷ್ಟೆ. ಅವಕಾಶಗಳನ್ನು ಬಳಸಿಕೊಂಡು ಆಯಾ ದೇಶಗಳ ರೀತಿ ನೀತಿಗಳನ್ನು ಪರಿಚಯಿಸಿಕೊಳ್ಳುತ್ತ ಜ್ಞಾನಾಭಿವೃದ್ಧಿ ಮಾಡಿಕೊಂಡು ಬರಬೇಕಾದುದು ಅತೀ ಮಹತ್ವ.

ಆದರೆ ಕಂಡದ್ದನ್ನೆಲ್ದಾ ದಾಖಲಿಸಬೇಕೆನ್ನುವ ಹುಚ್ಚು ಹಿಡಿದು ಬಿಟ್ಟರೆ ಅದು ಆ ಪ್ರದೇಶದ, ದೇಶದ ಕೈಪಿಡಿಯಾಗು- ತ್ತದೆಯೇ ಹೊರತು ಮೌಲ್ಯಯುತವಾದ ಸಾಹಿತ್ಯವಾಗುವುದಿಲ್ಲ.

ಪ್ರವಾಸ ಸಾಹಿತ್ಯ ತನ್ನ ಪ್ರಯಾಸದ 120 ಮೆಟ್ಟಿಲುಗಳನ್ನೇರಿ (ವರ್ಷಗಳು) ಶಿಖರ ತಲುಪಿದ ಸಂಭ್ರಮದಲ್ಲಿದೆ. ನಮ್ಮಲ್ಲಿ ಪ್ರವಾಸಿಗರು ಲವಲವಿಕೆಯಿಂದ ವಿಶ್ವದ ನಾನಾ ಕಡೆಗೆ ಹೆಜ್ಜೆ ಮೂಡಿಸಿ ಬಂದಿದ್ದಾರೆ. ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ಧಾರೆ. ಅವರೆಲ್ಲರಿಗೂ ಮತ್ತೊಮ್ಮೆ ವಂದನೆಗಳು.

****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...