Home / ಕವನ / ಕವಿತೆ / ನಳಿನಾಕ್ಷಿಯ ಕಂಡೆ ನಾ

ನಳಿನಾಕ್ಷಿಯ ಕಂಡೆ ನಾ

ನಳಿನಾಕ್ಷಿಯ ಕಂಡೆ ನಾ
ತಿಳವಳ್ಳಿಯ ಕಳಿಯುಳ್ಳ ಮೋಜಿನ್ಹೆಣ್ಣ
ಹೊಳಿವ ಚಂದುಟಿ ಎಳಿವ ಮುಡಿ
ಥಳ ಥಳ ಪದಕ ಒಪ್ಪಿನ ಜಾಣೆ
ತನ್ನ ಕಲಶ ಕುಚಯುಗದಲಿ
ಸರಿಯ ಗರತಿಯರೋಳು ಮೇಲ್ ||೧||

ಕುಸುಮಶರನ ರಾಣಿಯೋ
ಕೊರಳೆಸೆವ ಪಲ್ಲವ ಪಾಣಿಯೋ
ಬಿಸಿಜಿಕೊರಕ ಸ್ಥಾನವೋ
ಯೋಚಿಸಿ ರೂಪ ಮಧುರ ಪಲ್ಲವ ಪಾಣಿಯೋ
ವಸುಧಿಯೊಳು ಕಡುಜಾಣ ರೀತಿಯ
ಕುಶಲ ರತಿಯಲೆ ಕೂಡಿದ್ಹೇಳ್
ಅಸು ನೀಗದೆ ಬಿಡರು ಎಮ್ಮನು
ಮಸಣಿಸಿ ಮುಂದೆ ಹೋಗಲೊಲ್ಲದು ||೨||

ಸರಳ ಬೈತಲಿ ಮರನ ಸಿಂಗಾಡಿಯು
ತೀಡಿ ಪೊರ್ಬಿನ ಕೊರಳೊಳ್
ಹಾರ ಮುತ್ತಿನ ರತ್ನಗಳಿಂದ ಮೆರೆಯುತಿಹುದು ಒಡ್ಡ್ಯಾಣ
ತರುಣಿ ಕರ್ಣದೊಳಿಟ್ಟು ಆಭರಣ
ಅಪರಿಮಿತ ಇನ್ನೆಷ್ಟು ಹೇಳಲಿ
ನೆರೆದ ಜನರ್ಬಾಯ್ದೆರೆವರೀಕೆಯ
ತುರುಬ ಚಲ್ವಿಕೆಗೆ ಮರುಳಗೊಂಡರು ||೩||

ಹವಳದುಟಿಯ ಬಾವಲಿಯು
ಕುವಲನೇತ್ರ ದಿವಿಜಲೋಕದ ಸ್ತ್ರೀ
ಅಯ್ಯಯ್ಯೋ ನವಮೋಹನದ ನಿಧಿಯು
ಭವದ ಅಜನ ಪಟ್ಟದ ರಾಣಿಯು
ಶಿವಶಿವಾ ಹೆಣ್ಣಿವಳ ರೂಪಕ
ಅವನೀಪತಿ ಕಡೆಯಿಲ್ಲ ದೇವರು
ಪವನಸುತ ಘನರೂಪ ಮಾರುತಿ
ಅವನ ಬಲದಿಂದುಳಿದೆನು ಜವದಿ ||೪||

****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...