Home / ಲೇಖನ / ವಿಜ್ಞಾನ / ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood Bank) ನಲ್ಲಿ ರಕ್ತ ತಂದು ಪೂರೈಸ- ಬೇಕಾಗುತ್ತದೆ. ಇದೆಲ್ಲ ಕಷ್ಟಕರವಾದ ಕೆಲಸವೆ. ಆದರೆ ತಂತ್ರಜ್ಞಾನದಿಂದ ರಕ್ತವೂ ಸೃಷ್ಟಿಯಾಗಿ  ಬೇಕಾದವರಿಗೆ ಅಂಗಡಿಯಲ್ಲಿ ಸಿಗುವಂತಾದರೆ ಅದಕ್ಕಿಂತಲೂ ಇನ್ನೇನು ಬೇಕು. ರೋಗಿಯ ಪುಣ್ಯ ರಕ್ತಕ್ಕಾಗಿ ಅಲೆಯುವ ಸಮಸ್ಯೆಯೇ ಇರಲಾರದು. ಇಂತಹ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ‘ವಿಟ್‌ವೈಸ್’ ಎಂಬ ವಿಜ್ಞಾನಿ ಜೈವ ತಂತ್ರಜ್ಞಾನ ಸಾಧನೆಯಿಂದ ರಕ್ತದ ಸೃಷ್ಟಿಯನ್ನು ಕಂಡು ಹಿಡಿದರು. ಕೆಂಬ್ರಿಡ್ಜ್ ಮಸಾಚುಸೆಟ್ಟ್‌ನಲ್ಲಿರುವ  ಆಂಟೋಜೆನಿ ಎಂಬ ಜೈವ ತಾಂತ್ರಿಕ ಸಂಸ್ಥೆಯಲ್ಲಿ ಸಂಶೋಧಕ ವ್ಶೆದ್ಯರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಪಥಮವಾಗಿ ಆದಿಕೋಶಗಳನ್ನು ಗುರುತಿಸಿ, ಪ್ರತ್ಯೇಕಿಸಿ ಪ್ರಯೋಗಾಲಯದ ಪ್ಲಾಸ್ಟಿಕ್ ತಟ್ಟೆಯೊಂದರಲ್ಲಿ ಅವನ್ನು ಬಿತ್ತಿದರು. ಅವಕ್ಕೆ ಪೋಶಾಕಾಂಶಗಳನ್ನು ಒದಗಿಸಿದರು. ಸೂಕ್ತಜನಕಾಣುಗಳನ್ನು ಪೂರೈಸಿದರು. ಕೆಲವೇ ದಿನಗಳಲ್ಲಿ ನಿಬ್ಬೆರಗಿನ ಫಲಿತಾಂಶವನ್ನು ನೋಡಿ ಕುಣಿದಾಡಿದರು. ಆದಿಕೋಶವು ಕೆಂಗಣಗಳನ್ನು ಉತ್ಪಾದಿಸಲಾಂಭಿಸಿತು. ರಕ್ತವು ಸ್ಪಷ್ಟಿಯಾಯಿತು. ಈ. ಸೂತ್ರವನ್ನು ಅನುಸರಿಸಿ ಸಂಶೋಧಕರು ರಕ್ತವನ್ನು ಸೃಷ್ಟಿಸಿ ಅಶಕ್ತ ರೋಗಿಗಳಿಗೆ ಈ ರಕ್ತವನ್ನು ಪೂರೈಸುತ್ತಾರೆ ಎಂಬ ದಿನಗಳು ಬರುತ್ತವೆ !

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...