Home / ಲೇಖನ / ವಿಜ್ಞಾನ / ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood Bank) ನಲ್ಲಿ ರಕ್ತ ತಂದು ಪೂರೈಸ- ಬೇಕಾಗುತ್ತದೆ. ಇದೆಲ್ಲ ಕಷ್ಟಕರವಾದ ಕೆಲಸವೆ. ಆದರೆ ತಂತ್ರಜ್ಞಾನದಿಂದ ರಕ್ತವೂ ಸೃಷ್ಟಿಯಾಗಿ  ಬೇಕಾದವರಿಗೆ ಅಂಗಡಿಯಲ್ಲಿ ಸಿಗುವಂತಾದರೆ ಅದಕ್ಕಿಂತಲೂ ಇನ್ನೇನು ಬೇಕು. ರೋಗಿಯ ಪುಣ್ಯ ರಕ್ತಕ್ಕಾಗಿ ಅಲೆಯುವ ಸಮಸ್ಯೆಯೇ ಇರಲಾರದು. ಇಂತಹ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ‘ವಿಟ್‌ವೈಸ್’ ಎಂಬ ವಿಜ್ಞಾನಿ ಜೈವ ತಂತ್ರಜ್ಞಾನ ಸಾಧನೆಯಿಂದ ರಕ್ತದ ಸೃಷ್ಟಿಯನ್ನು ಕಂಡು ಹಿಡಿದರು. ಕೆಂಬ್ರಿಡ್ಜ್ ಮಸಾಚುಸೆಟ್ಟ್‌ನಲ್ಲಿರುವ  ಆಂಟೋಜೆನಿ ಎಂಬ ಜೈವ ತಾಂತ್ರಿಕ ಸಂಸ್ಥೆಯಲ್ಲಿ ಸಂಶೋಧಕ ವ್ಶೆದ್ಯರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಪಥಮವಾಗಿ ಆದಿಕೋಶಗಳನ್ನು ಗುರುತಿಸಿ, ಪ್ರತ್ಯೇಕಿಸಿ ಪ್ರಯೋಗಾಲಯದ ಪ್ಲಾಸ್ಟಿಕ್ ತಟ್ಟೆಯೊಂದರಲ್ಲಿ ಅವನ್ನು ಬಿತ್ತಿದರು. ಅವಕ್ಕೆ ಪೋಶಾಕಾಂಶಗಳನ್ನು ಒದಗಿಸಿದರು. ಸೂಕ್ತಜನಕಾಣುಗಳನ್ನು ಪೂರೈಸಿದರು. ಕೆಲವೇ ದಿನಗಳಲ್ಲಿ ನಿಬ್ಬೆರಗಿನ ಫಲಿತಾಂಶವನ್ನು ನೋಡಿ ಕುಣಿದಾಡಿದರು. ಆದಿಕೋಶವು ಕೆಂಗಣಗಳನ್ನು ಉತ್ಪಾದಿಸಲಾಂಭಿಸಿತು. ರಕ್ತವು ಸ್ಪಷ್ಟಿಯಾಯಿತು. ಈ. ಸೂತ್ರವನ್ನು ಅನುಸರಿಸಿ ಸಂಶೋಧಕರು ರಕ್ತವನ್ನು ಸೃಷ್ಟಿಸಿ ಅಶಕ್ತ ರೋಗಿಗಳಿಗೆ ಈ ರಕ್ತವನ್ನು ಪೂರೈಸುತ್ತಾರೆ ಎಂಬ ದಿನಗಳು ಬರುತ್ತವೆ !

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...