Home / ಲೇಖನ / ವಿಜ್ಞಾನ / ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪೆಯನ್ನು ತುಳಿದು ಕಾಲು ಜಾರಿದ ಅನುಭವ ಬೇಕಾವಷ್ಟು ಜನಕ್ಕಿದೆ ಅಲ್ಲವೆ? ಇಂಥಹ ಬಾಳೆಹಣ್ಣಿನ ಸಿಪ್ಪೆಯು ತಾಜ್ಯ ವಸ್ತುವಾಗಿ ಅಲ್ಲಲ್ಲಿ ಬೀಳುತ್ತಲೇ ಇರುತ್ತದೆ. ನಮ್ಮಲ್ಲಿ ಸಾಮಾನ್ಯವಾಗಿ ನಿರುಪಯುಕ್ತ ವಸ್ತುವಾಗಿ ಕರಗಿ ಹೋಗುವ ಇಂಥಹ ಸಿಪ್ಪೆಯನ್ನು ಥಾಯ್ಲೆಂಡ್ ದೇಶದ ಜನ ಹಣ್ಣನ್ನು ತಿಂದು ಸಿಪ್ಪೆಯಿಂದಲೂ ಆಗಬಹುದಾದ ಉಪಯೋಗವನ್ನು ಕಂಡುಕೊಂಡಿದ್ದಾರೆ. ಏಕೆಂದರೆ ಇಲ್ಲಿ ಬಾಳೆ ಒಂದು ಪ್ರಮುಖವಾದ ಬೆಳೆ. ಇಲ್ಲಿ ಈ ಸಿಪ್ಪೆಯ ರಾಶಿ ರಾಶಿ ಬೀಳುತ್ತದೆ. ಇಂಥಹ ಸಿಪ್ಪೆಯನ್ನು ಬಳಸಿಕೊಂಡು ಜೈವಿಕ ಅನಿಲವನ್ನು ಉತ್ಪಾದಿಸುವ (Gas) ಸ್ಥಾವರವನ್ನು ಥಾಯ್ಲಾಂಡಿನ ನರಸುವಾನ್ ವಿಶ್ವವಿದ್ಯಾನಿಲಯದ ಸೌರಶಕ್ತಿತರಬೇತಿ ಕೇಂವ್ರದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬಾಳೆಹಣ್ಣನ್ನು ಸಂಸ್ಕರಿಸುವ ಉದ್ಯಮಗಳು ಅಲ್ಲಿಯ ಗ್ರಾಮೀಣ ಪ್ರದೇಶದಲ್ಲಿ ಹೇರಳವಾಗಿವೆ. ಉಳಿದ ಸಿಪ್ಪೆಯಿಂದ ಇಂಧನ ಅನಿಲವನ್ನು ಉತ್ಪಾದಿಸಿದರೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಜತೆಗೆ ಪರಿಸರ ಮಾಲಿನ್ಯವನ್ನು ಸಹ ತಡೆಗಟ್ಟಬಹುದು.

ದನ ಕರಗಳ ಸಗಣಿಯನ್ನು ಮತ್ತು ಗಿಡಗಳನ್ನು ಕೊಳೆಯಿಸಿ ಮಿಥೇನ್ ಅನಿಲವನ್ನು ಉತ್ಪಾದಿಸುವಂತೆ, ದನಗಳ ಸಗಣಿಯಿಂದ ಗೋಬರ್ ಗ್ಯಾಸನ್ನು ಬಳೆಸುವಂತೆ ಥಾಯ್ಲಾಂಡಿನಲ್ಲಿ ಬಾಳೆಹಣ್ಣಿನ ಸಿಪ್ಪೆಯಿಂದ ಇಂಧನ ಅನಿಲವನ್ನು ತಯಾರಿಸುವ ತಂತ್ರಜ್ಞಾನ ಬೆಳಕಿಗೆ ಬಂದಿದೆ. ಥಾಯ್ಲಾಂಡಿನ ಬಂಗ್‌ಕ್ರಾತುಮ್ ಎಂಬ ಜಿಲ್ಲೆಯಲ್ಲಿ ನಡೆಯಿಸಿದ ಸಮೀಕ್ಷೆಯಿಂದ ಅಲ್ಲಿ ವರ್ಷಕ್ಕೆ 10 ಸಾವಿರ ಟನ್‌ಗಳಷ್ಟು ಬಾಳೆಹಣ್ಣುಗಳನ್ನು ಒಣಗಿಸಲಾಗುತ್ತದೆ. ಮತ್ತು ಇದರಿಂದ ಎರಡುವರೇ ಸಾವಿರ ಟನ್‌ಗಳಷ್ಟು ಸಿಪ್ಪೆ ಉಳಿಯುತ್ತದೆಂದು ತಿಳಿದು ಬಂದಿದೆ. ಇಂಥ ರಾಶಿ ರಾಶಿ ಬೀಳುವ ಸಿಪ್ಪೆಯಿಂದ  ಅನಾಯಾಸವಾಗಿ ಇಂಧನದ ಅನಿಲವನ್ನು ಉತ್ಪಾದಿಸುವ ಘಟಕಗಳು ನಡೆಯುತ್ತದೆ.

ಈ ಯೋಜನೆಯ ಅನುಷ್ಠಾನಕ್ಕಾಗಿ ಜರ್ಮನಿಯ ತಾಂತ್ರಿಕ ಸಲಹಾ ಏಜೆನ್ಸಿಯು ಆರ್ಥಿಕ ಬೆಂಬಲ ನೀಡಿದೆ. 1995ರಲ್ಲಿ ಬಾಳೆಹಣ್ಣಿನ ಸಿಪ್ಪೆ ಆಧಾರಿತ ಇಂಧನ ಅನಿಲ ಸ್ಥಾವರ ಸ್ಥಾಪನೆಗೊಂಡಿದೆ. ಆರ್ಥಿಕವಾಗಿ ಬಾಳೆಹಣ್ಣು ಬೆಳೆಯುವ ಭಾರತದ ಪ್ರದೇಶಗಳಲಿ ನಿರುಪಯುಕ್ತವಾಗುವ ಬಾಳೆಹಣ್ಣಿನ ಸಿಪ್ಪೆಯಿಂದ ಇಂಥಹ ಅನಿಲವನ್ನು ಉತ್ಪಾದಿಸುವ
ಯೋಜನೆ ಬಂದರೆ ಇಂಧನದ ಸಮಸ್ಯೆ  ಒಂದಿಷ್ಟು ತೀರಿತು.

****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...