Home / ಲೇಖನ / ವಿಜ್ಞಾನ / ಮಣ್ಣುತಿನ್ನುವುದು ಆರೋಗ್ಯಕ್ಕೆ ಹಿತಕರ

ಮಣ್ಣುತಿನ್ನುವುದು ಆರೋಗ್ಯಕ್ಕೆ ಹಿತಕರ

“ಸಾಮಾನ್ಯವಾಗಿ ತಪ್ಪು ಮಾಡಿದ್ದರೆ ಮಣ್ಣುತಿನ್ನು ಹೋಗು” ಎಂದು ಉಡಾಫೆಯಾಗಿ ಹೇಳುವ ಜನರಿದ್ಧಾರೆ. ಒಂದರ್ಥದಲ್ಲಿ ಇದು ತಿನ್ನಲು ಯೋಗ್ಯವಲ್ಲದ್ದು ಎಂದೇ ಭಾವನೆ. ಅಥವಾ ಮಣ್ಣನ್ನು ಯಾರು ತಿನ್ನಲಾರರೆಂದೇ ಜನರ ನಂಬಿಕೆ. ಆದರೆ ಇತತ್ತೀಚಿನ ವೈಜ್ಞಾನಿಕ ಪ್ರಯೋಗಗಳ ಪ್ರಕಾರ ಮಣ್ಣು ಒಂದು ಆರೋಗ್ಯವರ್ಧಕ ಪದಾರ್ಥವೆಂದು ದೃಢಪಟ್ಟದೆ. ಇದರಲ್ಲಿ ಅನೇಕ ಪೌಷ್ಟಿಕಾಂಶಗಳು ಇವೆ; ಎಂದು ಸಾಬೀತಾದ ಮಾತು. ಕೆನಡಾದ ಇಬ್ಬರು ವಿಜ್ಞಾನಿಗಳು ಉತ್ತರಕೆರೋಲಿನಾ, ಚೀನಾ ಮತ್ತು ಜಿಂಬಾಬ್ವೆಯಲ್ಲಿ ಕೈಕೊಂಡ ಅಧ್ಯಯನದಿಂದ ಕಂಡು ಕೊಂಡಿದ್ದಾರೆ. ಶುದ್ದವಾದ ಹಳೆಯ ಮಣ್ಣು ಉತ್ತಮ ವಸ್ತುವೆಂದು ಸಂಶೋಧಕರ ಲ್ಲೊಬ್ಬರಾದ ಸುಸಾನ್ ಔಪ್ರೀಟರ್ ತಿಳಿಸುತ್ತಾರೆ. ಅದರಲ್ಲೂ ಭೂಮಿಯೊಳಗಿನ ಮಣ್ಣು ಕಬ್ಬಿಣ ಮತ್ತು ಅಯೋಡಿನ್‌ಗಳಿಂದ ಸಮೃದ್ಧವಾಗಿದ್ದರಿಂದ ಮಕ್ಕಳು ಮತ್ತು ಗರ್ಭಿಣಿಯರು ಉಪಯೋಗಿಸುತ್ತಾರೆ. ಅದರಲ್ಲೂ ಗರ್ಭಿಣಿಯರಿಗೆ ಈ ಮಣ್ಣು ಉತ್ತವು ಪೋಷಕಾಂಶ
ವೆಂದೂ ಅವರು ಹೇಳುತ್ತಾರೆ. (ವರದಿ : ಡ್ಯಾನ್‌ಬರಿ ಅಮೇರಿಕಾ ಅ. 26-1997)

ರೋಮನ್ನರು ಮಣ್ಣು ಮತ್ತು ಆಡಿನ ರಕ್ತವನ್ನು ಸೇರಿಸಿ ಮಾತ್ರೆಗಳನ್ನು ಮಾಡಿ ಉಪಯೋಗಿಸುತ್ತಿದ್ದರು. ಕಳೆದ ಶತಮಾನದಲ್ಲಿ ಜರ್ಮನ್ನರು ಬ್ರೆಡ್ಡಿನೊಂದಿಗೆ ಬೆಣ್ಣೆಯ ಬದಲು ಮಣ್ಣನ್ನು ಉಪಯೋಗಿಸುತ್ತಿದ್ದರಂತೆ. ಆಫ್ರಿಕಾದಲ್ಲಿ ಅಜೀರ್ಣವಾದವರಿಗೆ ಈ ಮಣ್ಣನ್ನೇ ಔಷಧಿಯನ್ನಾಗಿ ತಿನ್ನಲು ಕೊಡುತ್ತಾರೆ. ಈ ಮಣ್ಣಿನ ಸೇವನೆಯಲ್ಲಿ  ಉಪಕಾರಿಯಾಗಬಲ್ಲ ಅಂಶಗಳ ಬಗ್ಗೆ ಕೂಲಂಕುಷವಾಗಿ ಮನಗಾಣಲು ಟೋರಾಂಟೋ ವಿ. ವಿ. ಯ ಪ್ರಯೋಗಾಲಯದ ವಿಶ್ಲೇಷಕಿ ಡಾ|| ಸೂಸನ್ ಮತ್ತು ಯಾಕ್೯ ವಿ. ವಿ.ಯ ಪ್ರೊ.ವಿಲಿಯಂ ಮ್ಯಾಹನಿ ಅವರು ಅನೇಕ ಪ್ರಯೋಗ ನಡೆಯಿಸಿ ಒಪ್ಪಿಕೊಂಡರು. ಚೀನಾದ ಹುನಾನ್ ಪ್ರಾಂತ್ಯದ ಹಳದಿ ಮಿಶ್ರಿತ ಮೆದು ಮಣ್ಣಿನಲ್ಲಿ ಕಬ್ಬಿಣ, ಕ್ಯಾಲ್ಪಿಯಂ, ಮೆಗ್ಲೀಶಿಯಂ, ಪೊಟ್ಯಾಶಿಯಂ ಮತ್ತು ಇತರ ಖನಿಜಗಳಿವೆ. ಜಿಂಬಾಬ್ವೆಯ ಕೆಲವು ಮಣ್ಣಿನಲ್ಲಿ ಲಿನೈಟ್ ಪೌಷ್ಠಿಕಾಂಶ ಇರುವುದಾಗಿ ವಿಜ್ಞಾನಿಗಳು ತಿಳಿಸುತ್ತಾರೆ. ಮಣ್ಣಿನಿಂದಲೇ ನಮ್ಮನ್ನು ರಕ್ಷಿಸುವ ಬೆಳೆಗಳು ಬೆಳೆಯುತ್ತವೆ. ನೀರು, ಖನಿಜಗಳು ದೊರೆಯುತ್ತವೆ. ಜೀವರಕ್ಷಕ ವಿಟ್ಯಾಮಿನ್‌ಗಳು ಈ ಮಣ್ಣಿನಲ್ಲಿ ಇರುವುದರಿಂದಲೇ ಜೀವೋದ್ಭವ- ವಾಗುತ್ತದೆ. ಆದರೆ ಮಣ್ಣು ಕೊಳಕು ಪದಾರ್ಥವೆಂದು ಮಣ್ಣಿನ ಬದಲಾಗಿ ಜೀವರಕ್ಷಕ ಬೆಳೆಗಳ ಆಹಾರವಿರುವಾಗ ಬಹುತೇಕ ಜನ ತಿನ್ನುವುದಿಲ್ಲ ಮತ್ತು ಉದರದೊಳಗಿನ ನರಮಲಡಗಳ ತಂತುಗಳಲ್ಲಿ ಮುಣ್ಣು ಲೇಪನಗೊಂಡು
ನರಮಂಡಲದ ಕ್ರಿಯಾಶೀಲತೆಗೆ ತೊಡಕಾಗಲೂ ಬಹುದೆಂದು ಕೆಲವರ ಅಭಿಪ್ರಾಯ, ಆದ್ದರಿಂದ ಬಹುತೇಕ ಜನ ಮಣ್ಣು ತಿನ್ನಲಾರರು. ಒಂದು ವೇಳೆ ತಿಂದರೆ ಕೆಟ್ಟದ್ದೇನಲ್ಲ ಅಪಾಯಕಾರಿಯಾಗಲಾರದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...