Home / ಲೇಖನ / ವಿಜ್ಞಾನ / ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ ಅಮೂಲ್ಯ ವೈವಿಧ್ಯ ವಸ್ತು- ಗಳನ್ನು, ಉಪಯೋಗಗಳನ್ನು ಕಂಡು ಹಿಡಿದಿದ್ದಾರೆ. ಈ ಭತ್ತದ ಬೂದಿಯಿಂದ ಉತ್ಕೃಷ್ಠಗುಣಮಟ್ಟದ ಸಿಮೆಂಟ್ ತಯಾರಿಸಲು ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಬಳಕೆಯಲ್ಲಿರುವ ಇಂತಹ ಭತ್ತದ ಸಿಪ್ಪೆಯ ಬೂದಿ ಆಧಾರಿತ ಸಿಮೆಂಟ್ ಸಾಧಾರಣ ಸಿಮೆಂಟಿಗಿಂತಲೂ ಶ್ರೇ‍ಷ್ಠಮಟ್ಟದ್ದೆಂದು ತಿಳಿದು ಬರಿದಿದೆ. ಭತ್ತದ ಸಿಪ್ಪೆಯ ಬೂದಿಯು ಕಾಂಕ್ರಿಟ್ ತಂತ್ರಜ್ಞಾನದಲ್ಲಿಯೇ ಹೊಸಶಾಖೆಯೊಂದನ್ನು ತೆರೆದಿದೆ ಮಾತ್ರವಲ್ಲ “ಬಹುಪಯೋಗಿ” ಎಂದು ಖಚಿತವಾಗುತ್ತಲಿದೆ. ಸಿಮೆಂಟಿನಂತಹ ಪುಡಿರೂಪದ ವಸ್ತು ಅಷ್ಟೇ ಅಲ್ಲದೇ ಹೊಸ ನಮೂನೆಯ ಇಟ್ಟಗೆಗಳ ತಯಾರಿಕೆಯಲ್ಲಿಯೂ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಲಾಗುತ್ತದೆ. ಕಾಂಕ್ರೀಟ್ ರಸ್ತೆನಿರ್ಮಾಣ ಕಾರ್ಯ- ದಲ್ಲಿಯೂ ಇಂತಹ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿಕೊಳ್ಳಬಹುದೆಂದು ಪ್ರಯೋಗಗಳಿಂದ ಕಂಡುಹಿಡಿಯ- ಲಾಗಿದೆ. ದಿನನಿತ್ಯ ಮನೆ ಮತ್ತು ಹೋಟೆಲ್‌ಗಳಲ್ಲಿ ಭತ್ತವನ್ನು ಸುಟ್ಟು ಬೂದಿಯಾದ ನಂತರ ನಿರುಪಯುಕ್ತವೆಂದು ಬಿಸಾಕುತ್ತಾರೆ. ಬಹುತೇಕ ಭತ್ತಕುಟ್ಟುವ ಯಂತ್ರಗಳು ಉಗುಳಿದ ಹೊಟ್ಟನ ರಾಶಿಯನ್ನು ತಿಪ್ಪೆಗೆಸೆಯುತ್ತಾರೆ. ಅಥವಾ ಬಿಸಾಕುತ್ತಾರೆ. ಅತ್ಯಂತ ಉಪಯುಕ್ತವಾಗುವ ಈ ಭತ್ತದ ಹೊಟ್ಟನಿಂದಾಗುವ ಉಪಯೋಗಗಳನ್ನು ತಿಳಿದು ಸದುಪಯೋಗಪಡಿಸಿಕೊಳ್ಳಬೇಕಿದೆ. ಅಥವಾ ಇಂತಹ ತಂತ್ರಜ್ಞಾನ ಇರುವಲ್ಲಿಗೆ ಭತ್ತದ ಹೊಟ್ಟನ ಲೋಡುಗಳನ್ನು ಸಾಗಾಣಿಕೆ ಮಾಡಿ ಅದರಿಂದಲೂ ಹಣಗಳಿಸಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...