Home / ಲೇಖನ / ವಿಜ್ಞಾನ / ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ ಅಮೂಲ್ಯ ವೈವಿಧ್ಯ ವಸ್ತು- ಗಳನ್ನು, ಉಪಯೋಗಗಳನ್ನು ಕಂಡು ಹಿಡಿದಿದ್ದಾರೆ. ಈ ಭತ್ತದ ಬೂದಿಯಿಂದ ಉತ್ಕೃಷ್ಠಗುಣಮಟ್ಟದ ಸಿಮೆಂಟ್ ತಯಾರಿಸಲು ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಬಳಕೆಯಲ್ಲಿರುವ ಇಂತಹ ಭತ್ತದ ಸಿಪ್ಪೆಯ ಬೂದಿ ಆಧಾರಿತ ಸಿಮೆಂಟ್ ಸಾಧಾರಣ ಸಿಮೆಂಟಿಗಿಂತಲೂ ಶ್ರೇ‍ಷ್ಠಮಟ್ಟದ್ದೆಂದು ತಿಳಿದು ಬರಿದಿದೆ. ಭತ್ತದ ಸಿಪ್ಪೆಯ ಬೂದಿಯು ಕಾಂಕ್ರಿಟ್ ತಂತ್ರಜ್ಞಾನದಲ್ಲಿಯೇ ಹೊಸಶಾಖೆಯೊಂದನ್ನು ತೆರೆದಿದೆ ಮಾತ್ರವಲ್ಲ “ಬಹುಪಯೋಗಿ” ಎಂದು ಖಚಿತವಾಗುತ್ತಲಿದೆ. ಸಿಮೆಂಟಿನಂತಹ ಪುಡಿರೂಪದ ವಸ್ತು ಅಷ್ಟೇ ಅಲ್ಲದೇ ಹೊಸ ನಮೂನೆಯ ಇಟ್ಟಗೆಗಳ ತಯಾರಿಕೆಯಲ್ಲಿಯೂ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಲಾಗುತ್ತದೆ. ಕಾಂಕ್ರೀಟ್ ರಸ್ತೆನಿರ್ಮಾಣ ಕಾರ್ಯ- ದಲ್ಲಿಯೂ ಇಂತಹ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿಕೊಳ್ಳಬಹುದೆಂದು ಪ್ರಯೋಗಗಳಿಂದ ಕಂಡುಹಿಡಿಯ- ಲಾಗಿದೆ. ದಿನನಿತ್ಯ ಮನೆ ಮತ್ತು ಹೋಟೆಲ್‌ಗಳಲ್ಲಿ ಭತ್ತವನ್ನು ಸುಟ್ಟು ಬೂದಿಯಾದ ನಂತರ ನಿರುಪಯುಕ್ತವೆಂದು ಬಿಸಾಕುತ್ತಾರೆ. ಬಹುತೇಕ ಭತ್ತಕುಟ್ಟುವ ಯಂತ್ರಗಳು ಉಗುಳಿದ ಹೊಟ್ಟನ ರಾಶಿಯನ್ನು ತಿಪ್ಪೆಗೆಸೆಯುತ್ತಾರೆ. ಅಥವಾ ಬಿಸಾಕುತ್ತಾರೆ. ಅತ್ಯಂತ ಉಪಯುಕ್ತವಾಗುವ ಈ ಭತ್ತದ ಹೊಟ್ಟನಿಂದಾಗುವ ಉಪಯೋಗಗಳನ್ನು ತಿಳಿದು ಸದುಪಯೋಗಪಡಿಸಿಕೊಳ್ಳಬೇಕಿದೆ. ಅಥವಾ ಇಂತಹ ತಂತ್ರಜ್ಞಾನ ಇರುವಲ್ಲಿಗೆ ಭತ್ತದ ಹೊಟ್ಟನ ಲೋಡುಗಳನ್ನು ಸಾಗಾಣಿಕೆ ಮಾಡಿ ಅದರಿಂದಲೂ ಹಣಗಳಿಸಬಹುದು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್.ಎನ್.ಎಸ್.ರಾವ್