Home / ಲೇಖನ / ವಿಜ್ಞಾನ / ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ ಅಮೂಲ್ಯ ವೈವಿಧ್ಯ ವಸ್ತು- ಗಳನ್ನು, ಉಪಯೋಗಗಳನ್ನು ಕಂಡು ಹಿಡಿದಿದ್ದಾರೆ. ಈ ಭತ್ತದ ಬೂದಿಯಿಂದ ಉತ್ಕೃಷ್ಠಗುಣಮಟ್ಟದ ಸಿಮೆಂಟ್ ತಯಾರಿಸಲು ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಬಳಕೆಯಲ್ಲಿರುವ ಇಂತಹ ಭತ್ತದ ಸಿಪ್ಪೆಯ ಬೂದಿ ಆಧಾರಿತ ಸಿಮೆಂಟ್ ಸಾಧಾರಣ ಸಿಮೆಂಟಿಗಿಂತಲೂ ಶ್ರೇ‍ಷ್ಠಮಟ್ಟದ್ದೆಂದು ತಿಳಿದು ಬರಿದಿದೆ. ಭತ್ತದ ಸಿಪ್ಪೆಯ ಬೂದಿಯು ಕಾಂಕ್ರಿಟ್ ತಂತ್ರಜ್ಞಾನದಲ್ಲಿಯೇ ಹೊಸಶಾಖೆಯೊಂದನ್ನು ತೆರೆದಿದೆ ಮಾತ್ರವಲ್ಲ “ಬಹುಪಯೋಗಿ” ಎಂದು ಖಚಿತವಾಗುತ್ತಲಿದೆ. ಸಿಮೆಂಟಿನಂತಹ ಪುಡಿರೂಪದ ವಸ್ತು ಅಷ್ಟೇ ಅಲ್ಲದೇ ಹೊಸ ನಮೂನೆಯ ಇಟ್ಟಗೆಗಳ ತಯಾರಿಕೆಯಲ್ಲಿಯೂ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಲಾಗುತ್ತದೆ. ಕಾಂಕ್ರೀಟ್ ರಸ್ತೆನಿರ್ಮಾಣ ಕಾರ್ಯ- ದಲ್ಲಿಯೂ ಇಂತಹ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿಕೊಳ್ಳಬಹುದೆಂದು ಪ್ರಯೋಗಗಳಿಂದ ಕಂಡುಹಿಡಿಯ- ಲಾಗಿದೆ. ದಿನನಿತ್ಯ ಮನೆ ಮತ್ತು ಹೋಟೆಲ್‌ಗಳಲ್ಲಿ ಭತ್ತವನ್ನು ಸುಟ್ಟು ಬೂದಿಯಾದ ನಂತರ ನಿರುಪಯುಕ್ತವೆಂದು ಬಿಸಾಕುತ್ತಾರೆ. ಬಹುತೇಕ ಭತ್ತಕುಟ್ಟುವ ಯಂತ್ರಗಳು ಉಗುಳಿದ ಹೊಟ್ಟನ ರಾಶಿಯನ್ನು ತಿಪ್ಪೆಗೆಸೆಯುತ್ತಾರೆ. ಅಥವಾ ಬಿಸಾಕುತ್ತಾರೆ. ಅತ್ಯಂತ ಉಪಯುಕ್ತವಾಗುವ ಈ ಭತ್ತದ ಹೊಟ್ಟನಿಂದಾಗುವ ಉಪಯೋಗಗಳನ್ನು ತಿಳಿದು ಸದುಪಯೋಗಪಡಿಸಿಕೊಳ್ಳಬೇಕಿದೆ. ಅಥವಾ ಇಂತಹ ತಂತ್ರಜ್ಞಾನ ಇರುವಲ್ಲಿಗೆ ಭತ್ತದ ಹೊಟ್ಟನ ಲೋಡುಗಳನ್ನು ಸಾಗಾಣಿಕೆ ಮಾಡಿ ಅದರಿಂದಲೂ ಹಣಗಳಿಸಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...