Home / ಲೇಖನ / ವಿಜ್ಞಾನ / ಮಾನವನ ಚರ್ಮ ಉತ್ಪಾದಿಸುವ ತಂತ್ರಜ್ಞಾನ

ಮಾನವನ ಚರ್ಮ ಉತ್ಪಾದಿಸುವ ತಂತ್ರಜ್ಞಾನ

ಬೆಂಕಿಯಿಂದ ಚರ್ಮಸುಟ್ಟು ಹೋದಾಗ ಅಥವಾ ಚರ್ಮದ ಕೊಳೆತದಿಂದಾಗಿ, ಒಳಗಿನ ಮಾಂಸ ಹೊರಕಾಣುವಾಗ ಅಥವಾ ಅಪಘಾತ ಇನ್ನಿತರೆ ಅವಘಡಗಳಲ್ಲಿ ಚರ್ಮಕ್ಕೆ ಬಾಧೆಯಾದಾಗ ಆ ಸ್ಥಳಗಳಿಗೆ ಬೇರೆ ಚರ್ಮವನ್ನು ಕವಚ ಗೊಳಿಸಿ (ಜೀವಾಣು) ಗಳ ಕ್ರಿಯೆ ನಡೆಯುವಂತೆ ಮಾಡಲಾಗುತ್ತೆದೆ. ಇಲ್ಲಿಯವರೆಗೆ ಅದೇ ವ್ಯಕ್ತಿಯ ಬೇರೆ ಭಾಗದ ಚರ್ಮವನ್ನು ಸುಲಿದು ಹಾಕುವ ಪದ್ದತಿ ಇತ್ತು ಇನ್ನು ಮುಂದೆ ಮುಂದುವರಿದ ವೈಜ್ಞಾನಿಕ ತಂತ್ರಗಳನ್ನು ಬಳಸಿ ಹೊಸ ಬಗೆಯ ಚರ್ಮವನ್ನೇ ಉತ್ಪಾದಿಸಿ ಕಿತ್ತು ಹೋದ ಭಾಗಕ್ಕೆ ಅಂಟಿಸುವ ತಂತ್ರಜ್ಞಾನ ಬರಲಿದೆ.

ಕ್ಯಾಲಿಫೋರ್ನಿಯಾದ ಜೀವತಾಂತ್ರಿಕ ಸಂಸ್ಥೆಯ ವಿಜ್ಞಾನಿಗಳು ಕೆಲವು ದಿನಗಳಲ್ಲಿ ಇಂಚು ಉದ್ಧ 6 ಇಂಚು ಅಗಲದ ಚರ್ಮದ ಹಾಳೆಗಳನ್ಪು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಲಿದ್ದಾರೆ. ಇಂತಹ ಚರ್ಮದ ಹಾಳೆಗಳು ಬೆಂಕಿ ಅಪಘಾತಗಳಲ್ಲಿ ಹಾನಿಗೊಂಡ ಚರ್ಮದ ಮೇಲೆ ಹೊದಿಸಲು ತುಂಬ ಉಪಯುಕ್ತವೆಂದು ಹೇಳುತ್ತಾರೆ. ಕ್ಯಾಲಿಫೋರ್ನಿಯಾದ ಜೋಸೆಪ್ ಮತ್ತು ರಾಬರ್ಟ್ ಅವರು ಅನೇಕ ಪ್ರಯೋಗಗಳನ್ನು ಮಾಡಿ ಕೃತಕ ಚರ್ಮದ ಉತ್ಪಾದನೆಯನ್ನೂ ಕಂಡುಹಿಡಿದಿದ್ದಾರೆ. ಕ್ಯಾಲಿಫೋನಿರ್ಯದ ಉನ್ನತ ಅಂಗಾಂಶ (ATS) ವಿಜ್ಞಾನಿಗಳ ಸಂಸ್ಥೆ ಲಾಜೋಲಾವದಲ್ಲಿ ಜಗತ್ತಿನ ಮೊಟ್ಟಮೊದಲ ಚರ್ಮದ ಕಾರ್ಖಾನೆಯ ಕಟ್ಟಡವನ್ನು ಪೂರ್ಣಗೊಳಿಸಿದ್ದಾರೆ. ಉತ್ಪಾದನೆಯನ್ನು ಆರಂಭಿಸಲು ಸರ್ಕಾರದ ಅನುಮತಿ (AIS)ಗಾಗಿ ಕಾಯುತ್ತಿದೆ.

ಈ ಚರ್ಮವು ಚಪ್ಪಟೆಯಾಕಾರವಾಗಿದ್ದು ಸಂಕೀರ್ಣ ಅಂಗವಾಗಿದೆ ಇದರ ಎರಡು ಪದರುಗಳು ವಿಶೇಷ ಕಾರ್ಯ ನಿರ್ವಹಿಸಲೆಂದೇ ನಿರ್ಮಾಣಗೊಂಡಿವೆ. ಕಳೆದ ದಶಕದಲ್ಲಿ ವಿಜ್ಞಾನಿಗಳು ಅವಿರತವಾಗಿ ಪ್ರಯತ್ನ ನಡಸಿದ್ದು ಈಗ ಫಲಕಾರಿಯಾಗಿದೆ. ಹಾಸಿಗೆಯ ಮೇಲೆ ಸತತವಾಗಿ ಮಲಗಿರುವುದರಿಂದ ಉಂಟಾಗುವ ಗಾಯ (Bedsores) ಹಾಗೂ ಸಕ್ಕರೆ ರೋಗದ (Diabetic Ulsers) ಹುಣ್ಣುಗಳನ್ನು ಗುಣಪಡಿಸಲು ಬಳಸುವ ಚರ್ಮ ಭಾಗಗಳೆಂದಲೇ ವರ್ಷಒಂದಕ್ಕೆ 3 ರಿಂದ 5 ಶತ ಕೋಟಿ ಡಾಲರು ವಹಿವಾಟು ಆಗಲಿದೆ. ಪ್ರಯೋಗಾಲಯದಲ್ಲಿ ತಯಾರಿಸಿದ ಚರ್ಮಕ್ಕೆ ಬೇಡಿಕೆ ಇರುವ ಮತ್ತೊಂದು ಮಾರುಕಟ್ಟೆ ಯೆಂದರೆ ಸುಟ್ಟಗಾಯದ ರೋಗಿಗಳದ್ಭು ಇದರ ಆದಾಯ 30 ಕೋಟಿ ಡಾಲರ್ ಅಗಬಹುದೆಂದು ಯೋಜನೆ ಹಾಕಿಕೊಂಡಿದೆ.

ಇದೇ ತಂತ್ರ ಜ್ಞಾನವನ್ನು ಬಳಸಿ ಮೃದ್ವಸ್ಥಿ (Cartilage) ಮತ್ತು ಸ್ಥಾನದ ಅಂಗಾಂಶಗಳನ್ನು ಪ್ರಯೋಗಾಲಯದಲ್ಲಿ ಉತ್ಪಾದಿಸುವ ಕಾರ್ಯವೂ ನಡೆದಿದೆ.

****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...