ಜಯ ಭಾರತ ಜನನಿಯ ತನುಜಾತೆ |

ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೆ |
ಜಯ ಹೇ ರಸ‌ಋಷಿಗಳ ಬೀಡೆ |
ಭೂದೇವಿಯ ಮುಕುಟದ ನವ ಮಣಿಯೆ |
ಗಂಧದ ಚಂದದ ಹೊನ್ನಿನ ಗಣಿಯೆ |
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಜನನಿಯ ಜೋಗುಳ ವೇದದ ಘೋಷ |
ಜನನಿಗೆ ಜೀವವು ನಿನ್ನಾವೇಶ |
ಹಸುರಿನ ಗಿರಿಗಳ ಸಾಲೆ |
ನಿನ್ನಯ ಕೊರಳಿನ ಮಾಲೆ |
ಕಪಿಲ ಪತಂಜಲ ಗೌತಮ ಜಿನನುತ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಶಂಕರ ರಾಮಾನುಜ ವಿದ್ಯಾರಣ್ಯ |
ಬಸವೇಶ್ವರರಿಹ ದಿವ್ಯಾರಣ್ಯ |
ರನ್ನ ಷಡಕ್ಷರಿ ಪೊನ್ನ |
ಪಂಪ ಲಕುಮಿಪತಿ ಜನ್ನ |
ಕಬ್ಬಿಗರುದಿಸಿದ ಮಂಗಳ ಧಾಮ |
ಕವಿ ಕೋಗಿಲೆಗಳ ಪುಣ್ಯಾರಾಮ |
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ತೈಲಪ ಹೊಯ್ಸಳರಾಳಿದ ನಾಡೆ |
ಡಂಕಣ ಜಕಣರ ನೆಚ್ಚಿನ ಬೀಡೆ |
ಕೃಷ್ಣ ಶರಾವತಿ ತುಂಗಾ |
ಕಾವೇರಿಯ ವರ ರಂಗಾ |
ಚೈತನ್ಯ ಪರಮಹಂಸ ವಿವೇಕರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಸರ್ವಜನಾಂಗದ ಶಾಂತಿಯ ತೋಟ |
ರಸಿಕರ ಕಂಗಳ ಸೆಳೆಯುವ ನೋಟ |
ಹಿಂದೂ ಕ್ರೈಸ್ತ ಮುಸಲ್ಮಾನ |
ಪಾರಸಿಕ ಜೈನರುದ್ಯಾನ |
ಜನಕನ ಹೋಲುವ ದೊರೆಗಳ ಧಾಮ |
ಗಾಯಕ ವೈಣಿಕರಾರಾಮ |
ಕನ್ನಡ ನುಡಿ ಕುಣಿದಾಡುವ ದೇಹ |
ಕನ್ನಡ ತಾಯಿಯ ಮಕ್ಕಳ ಗೇಹ |

ಜಯ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯ್ಕುಗಳು
Next post ಆರೂಢಾ ಈರೂಢಾ ಆರೂಢಾ ಯಾ ಆಲಿ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…