ಜಯ ಭಾರತ ಜನನಿಯ ತನುಜಾತೆ |

ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೆ |
ಜಯ ಹೇ ರಸ‌ಋಷಿಗಳ ಬೀಡೆ |
ಭೂದೇವಿಯ ಮುಕುಟದ ನವ ಮಣಿಯೆ |
ಗಂಧದ ಚಂದದ ಹೊನ್ನಿನ ಗಣಿಯೆ |
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಜನನಿಯ ಜೋಗುಳ ವೇದದ ಘೋಷ |
ಜನನಿಗೆ ಜೀವವು ನಿನ್ನಾವೇಶ |
ಹಸುರಿನ ಗಿರಿಗಳ ಸಾಲೆ |
ನಿನ್ನಯ ಕೊರಳಿನ ಮಾಲೆ |
ಕಪಿಲ ಪತಂಜಲ ಗೌತಮ ಜಿನನುತ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಶಂಕರ ರಾಮಾನುಜ ವಿದ್ಯಾರಣ್ಯ |
ಬಸವೇಶ್ವರರಿಹ ದಿವ್ಯಾರಣ್ಯ |
ರನ್ನ ಷಡಕ್ಷರಿ ಪೊನ್ನ |
ಪಂಪ ಲಕುಮಿಪತಿ ಜನ್ನ |
ಕಬ್ಬಿಗರುದಿಸಿದ ಮಂಗಳ ಧಾಮ |
ಕವಿ ಕೋಗಿಲೆಗಳ ಪುಣ್ಯಾರಾಮ |
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ತೈಲಪ ಹೊಯ್ಸಳರಾಳಿದ ನಾಡೆ |
ಡಂಕಣ ಜಕಣರ ನೆಚ್ಚಿನ ಬೀಡೆ |
ಕೃಷ್ಣ ಶರಾವತಿ ತುಂಗಾ |
ಕಾವೇರಿಯ ವರ ರಂಗಾ |
ಚೈತನ್ಯ ಪರಮಹಂಸ ವಿವೇಕರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಸರ್ವಜನಾಂಗದ ಶಾಂತಿಯ ತೋಟ |
ರಸಿಕರ ಕಂಗಳ ಸೆಳೆಯುವ ನೋಟ |
ಹಿಂದೂ ಕ್ರೈಸ್ತ ಮುಸಲ್ಮಾನ |
ಪಾರಸಿಕ ಜೈನರುದ್ಯಾನ |
ಜನಕನ ಹೋಲುವ ದೊರೆಗಳ ಧಾಮ |
ಗಾಯಕ ವೈಣಿಕರಾರಾಮ |
ಕನ್ನಡ ನುಡಿ ಕುಣಿದಾಡುವ ದೇಹ |
ಕನ್ನಡ ತಾಯಿಯ ಮಕ್ಕಳ ಗೇಹ |

ಜಯ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯ್ಕುಗಳು
Next post ಆರೂಢಾ ಈರೂಢಾ ಆರೂಢಾ ಯಾ ಆಲಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

cheap jordans|wholesale air max|wholesale jordans|wholesale jewelry|wholesale jerseys