Home / ಕವನ / ಕವಿತೆ / ಜಯ ಭಾರತ ಜನನಿಯ ತನುಜಾತೆ |

ಜಯ ಭಾರತ ಜನನಿಯ ತನುಜಾತೆ |

ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೆ |
ಜಯ ಹೇ ರಸ‌ಋಷಿಗಳ ಬೀಡೆ |
ಭೂದೇವಿಯ ಮುಕುಟದ ನವ ಮಣಿಯೆ |
ಗಂಧದ ಚಂದದ ಹೊನ್ನಿನ ಗಣಿಯೆ |
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಜನನಿಯ ಜೋಗುಳ ವೇದದ ಘೋಷ |
ಜನನಿಗೆ ಜೀವವು ನಿನ್ನಾವೇಶ |
ಹಸುರಿನ ಗಿರಿಗಳ ಸಾಲೆ |
ನಿನ್ನಯ ಕೊರಳಿನ ಮಾಲೆ |
ಕಪಿಲ ಪತಂಜಲ ಗೌತಮ ಜಿನನುತ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಶಂಕರ ರಾಮಾನುಜ ವಿದ್ಯಾರಣ್ಯ |
ಬಸವೇಶ್ವರರಿಹ ದಿವ್ಯಾರಣ್ಯ |
ರನ್ನ ಷಡಕ್ಷರಿ ಪೊನ್ನ |
ಪಂಪ ಲಕುಮಿಪತಿ ಜನ್ನ |
ಕಬ್ಬಿಗರುದಿಸಿದ ಮಂಗಳ ಧಾಮ |
ಕವಿ ಕೋಗಿಲೆಗಳ ಪುಣ್ಯಾರಾಮ |
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ತೈಲಪ ಹೊಯ್ಸಳರಾಳಿದ ನಾಡೆ |
ಡಂಕಣ ಜಕಣರ ನೆಚ್ಚಿನ ಬೀಡೆ |
ಕೃಷ್ಣ ಶರಾವತಿ ತುಂಗಾ |
ಕಾವೇರಿಯ ವರ ರಂಗಾ |
ಚೈತನ್ಯ ಪರಮಹಂಸ ವಿವೇಕರ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ

ಸರ್ವಜನಾಂಗದ ಶಾಂತಿಯ ತೋಟ |
ರಸಿಕರ ಕಂಗಳ ಸೆಳೆಯುವ ನೋಟ |
ಹಿಂದೂ ಕ್ರೈಸ್ತ ಮುಸಲ್ಮಾನ |
ಪಾರಸಿಕ ಜೈನರುದ್ಯಾನ |
ಜನಕನ ಹೋಲುವ ದೊರೆಗಳ ಧಾಮ |
ಗಾಯಕ ವೈಣಿಕರಾರಾಮ |
ಕನ್ನಡ ನುಡಿ ಕುಣಿದಾಡುವ ದೇಹ |
ಕನ್ನಡ ತಾಯಿಯ ಮಕ್ಕಳ ಗೇಹ |

ಜಯ ಭಾರತ ಜನನಿಯ ತನುಜಾತೆ |
ಜಯ ಹೇ ಕರ್ನಾಟಕ ಮಾತೆ
***

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...