Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಪ್ಲಾಸ್ಟಿಕ್

ಮಾಲಿನ್ಯ ರಹಿತ ಪ್ಲಾಸ್ಟಿಕ್

ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್ನು ಶುಷ್ಕಗೊಳಿಸುವಲ್ಲಿ ಅತಂಕಗೊಳಿಸಿ ಸಸ್ಯಗಳ ಬೆಳವಣಿಗೆ- ಯಾದಂತೆ ಮಾಡುತ್ತಿರುವುದೊಂದು ದುರಂತ. ಈ ಕಾರಣವಾಗಿ ಪರಿಸರಕ್ಕೆ ಮಾರಕವಾಗದೇ ಇರುವ ಮತ್ತು ಈಗಿನ ಪ್ಲಾಸ್ಟಿಕ್‌ನಂತೆ ಪಾರದರ್ಶಕವಾಗಿರುವ ಹೊಸ ಆವಿಷ್ಕಾರದ ಶೋಧನೆಯನ್ನು ವಿಜ್ಞಾನಿಗಳು ಮಾಡುತ್ತಲೇ
ಬರುತ್ತಿದ್ದಾರೆ.

ಕ್ರಿ.ಶ. 1879ರಲ್ಲಿಯೇ ಮಣ್ಣಿನಲ್ಲಿ ಕರಗಿ ಹೋಗುವ ಸಕ್ಕರೆಯ ಕಣಗಳಿಂದ ತಯಾರಿಸಿದ ಪ್ಲಾಸ್ಟಿಕ್ ಅನ್ನು ಅಮೇರಿಕದ ಮುದ್ರಕರೊಬ್ಬರು ಮೊಟ್ಟ ಮೊದಲ ಬಾರಿಗೆ ತಯಾರಿಸಿದ್ದರು. ಇದು ಬೆಳವಣಿಗೆ ಹೊಂದುವುದರಲ್ಲಿಯೇ 1909ರಲ್ಲಿ ಪೆಟ್ರೋಲಿಯಂ ಆಧಾರಿತ ಕೃತಕ ಪ್ಲಾಸ್ಟಿಕ್ ಬಂದ ನಂತರ ಮೊದಲಿನ ಪ್ಲಾಸ್ಟಿಕ್ ಮೂಲೆ ಗುಂಪಾಗಿ ಹೋಯಿತು.
ನಂತರ ಇದೇ ಒಂದು ಪರಿಸರಕ್ಕೆ ಮಾರಕವಾಗಿ ಕಾಡತೊಡಗಿತು.

ಸರಳವಾದ ಕ್ರಾಂತಿಕಾರಿ ತಂತ್ರ ಬಳಸಿ ಪ್ಲಾಸ್ಟಿಕ್ ತಯಾರಿಸಿದಲ್ಲಿ ಈ ಭೂಖಂಡ ಬಚಾವಾಗುವುದೆಂದು ಅರಿತ ವಿಜ್ಞಾನಿಗಳು “ಅಲ್ಕಾನಿಗೇನಿಸ್” ಒಂದು ಜಾತಿಯ ಬ್ಯಾಕ್ಟೀರಿಯಾದ ದೇಹದಲ್ಲಿ ಪ್ಲಾಸ್ಟಿಕ್‌ನಂತಹ ವಸ್ತುಸಂಗ್ರಹ- ವಾಗುತ್ತದೆಂದು ತಿಳಿಯಿತು. ಈ ಏಕಕೋಶ ಜೀವಿಗಳಲ್ಲಿ ತಮ್ಮ ತೂಕದ ಶೇಕಡ 99 ಭಾಗ ಪ್ಲಾಸ್ಟಿಕ್ ಜಿಗುಟು ದ್ರವ ಇದೆ ಎಂದು ವರ್ಜಿನಿಯಾದ ವಿಜ್ಞಾನಿಗಳು ಕಂಡುಹಿಡಿದರು. ಈ ಬ್ಯಾಕ್ಟೀರಿಯಾಗಳ ವಂಶವಾಹಿನಿಯನ್ನು ಅಭಿವೃದ್ಧಿ ಪಡಿಸಿ ಅಗತ್ಯವಿರುವಷ್ಟು ಪ್ಲಾಸ್ಟಿಕ್ ತಯಾರಿಸಬಹುದು. ಈ ತಂತ್ರವನ್ನು ಅಮೇರಿಕಾದಂತಹ ದೇಶವು ಹಿಂದುಳಿದ ರಾಷ್ಟ್ರಗಳಿಗ ಬಿಟ್ಟು ತೊಡದೇ ತಮ್ಮ ಹಳೆ ತಂತ್ರಜ್ಞಾನವನ್ನೇ ಸಾಗುಹಾಕುತ್ತದಾದ್ದರಿಂದ ಈಗಿನ ಪ್ಲಾಸ್ಟಿಕ್ ಸುಗ್ಗಿ ಹೆಚ್ಚಿ ಪರಿಸರ ನಾಶವಾಗುತ್ತಿರುವುದು. ಮುಂದೊಂದು ದಿನ ಈ ಹೊಸ ಫಲಶೃತಿಯನ್ನು ಅನುಭವಿಸುವ
ಕಾಲವೂ ಬರಬಹುದು.

ಇನ್ನೊಂದು ಸಂತೋಷದ ಸುದ್ದಿ ಎಂದರೆ ಜೋಳದ ತೆನೆಯಿಂದ ಹಾಗೂ ಕಾಳುಗಳಿಂದ ಮಣ್ಣಿನಲ್ಲಿ ಒಂದಾಗುವ ಪ್ಲಾಸ್ಟಿಕ್ ಅನ್ನು ತಯಾರಿಸಿಬುದೆಂದು ಇನ್ನೊಂದೆಡೆ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೇರಿಕಾದ ರಾಷ್ಟ್ರೀಯ ಪ್ರಯೋಗ ಶಾಲೆಯಲ್ಲಿ ಅಲೂಗಡ್ಡೆ ಸಿಪ್ಪೆಯಿಂದ ಪ್ಲಾಸ್ಟಿಕ್‌ನ್ನು ಈಗಾಗಲೇ ತಯಾರಿಸುತ್ತಿದ್ಧಾರೆ. ಉತ್ತರ ಭೂಭಾಗದಲ್ಲಿ ವಾಸಿಸುವ ಜನರು ರಾಶಿ ರಾಶಿ ಆಲೂಗಡ್ಡೆಯನ್ನು ತಿನ್ನುತ್ತಾರೆ ಮತ್ತು ಬಹುತೇಕ ಕಡೆ ಆಲೂಗಡ್ಡೆ- ಯನ್ನು ಯತೇಚ್ಚವಾಗಿ ಬೆಳೆಯಲಾಗುತ್ತದೆ. ಈ ಸಿಪ್ಪೆಯನ್ನೆಲ್ಲ ಪ್ಲಾಸ್ಟಿಕ್ ತಯಾರಿಸಲು ಬಳಸಿದರೆ ಇಂದಿನ ಪರಿಸರ
ಮಾಲಿನ್ಯದ ಸಮಸ್ಯೆಗ ಉತ್ತರ ಸಿಗಬಹುದು. ಇದು ಜೈವಿಕ ಪ್ಲಾಸ್ಟಿಕ್ ತಯಾರಿಸುವ ತಂತ್ರವಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...