Home / ಲೇಖನ / ವಿಜ್ಞಾನ / ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು ಸುರಕ್ಷಿತವಾಗಿ ಕಾರ್ಯಶೀಲಗೊಳ್ಳುತ್ತವೆ ಎಂದು ತಯಾರಕರ ಅಭಿಪ್ರಾಯ. ಒಳ್ಳೆಯ ‘ಧ್ವನಿತರಂಗ’ ಮಾಡವುದಲ್ಲದೇ ಯಾವುದೇ ವಿಧದ ಶಾಖಗಳು ಇಲ್ಲದೇ ಅಂದದ ಮನೆಗಳಿಗೊಂದು ಕಲಾಕೃತಿಯಂತಾಗುತ್ತದೆ.

ಈ ದೂರವಾಣಿಯನ್ನು ಬೀಟೆ ಮತ್ತು ತೇಗದ ಮರದಿಂದ ತಯಾರಿಸಲಾಗಿದ್ದು ಈ ಮಾದರಿಯನ್ನು ಪೇಟೆಂಟ್ ಮಾಡಿಸುವ ಪ್ರಯತ್ನ ಸಾಗಿದೆ. ತಿಂಗಳಿಗೆ ಒಂದೂವರೆ ಸಾವಿರೆದಷ್ಟು ಸೆಟ್‌ಗಳನ್ನು ನಿರ್ಮಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಎರಡು ಮಾದರಿಯಲ್ಲಿ ಇದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಮುಂದೆ ಇದೇ ರೀತಿಯಾಗಿ ಕಾರ್ಡ್‌ಲೆಸ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ತಯಾರಿಸುವ ಯೋಜನೆ ಹೊಂದಲಾಗಿದೆ. ಎಂದು ತಯಾರಕರು ತಿಳಿಸುತ್ತಾರೆ.
******

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...