Home / ಲೇಖನ / ವಿಜ್ಞಾನ / ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ ಮಾನಸಿಕವಾಗಿ, ದೈಹಿಕವಾಗಿ ಬಳಲಿದಾಗ ಮಗು ಬಳಲುತ್ತದೆ. ಉಲ್ಲಾಸದಿಂದಿರುವಾಗ ಒಳಗಡೆಯ ಶಿಶುವೂ ಕೂಡ ಆರೋಗ್ಯ ಪೂರ್ಣವಾಗಿ ಬೆಳೆಯುತ್ತದೆ.

ತಾಯಿಯಾದವಳು ಗರ್ಭದೊಳಗಿನ ತನ್ನ ಮಗುವಿನೊಂದಿಗೆ ಮಾತನಾಡಲು ‘ಎಂಬ್ರಿಯೋಫೋನ್’ ಎಂಬ ಹೊಸ ಉಪಕರಣವನ್ನು ಬಳಸಬಹುದಾಗಿದೆ. ಸಣ್ಣ ಗಾತ್ರದ ಒಂದು ಮೈಕ್ರೋಫೋನ್ ಮತ್ತು ಮೊಬೈಲ್ ರೀಸಿವರ್‌ವನ್ನು ಒಳಗೊಂಡಿರುವ ಈ ಉಪಕರಣವನ್ನು ಗರ್ಭಿಣಿಯ ಸೊಂಟಕ್ಕೆ ಬೆಲ್ಟಿನ ಮೂಲಕ ಕಟ್ಟಲಾಗುತ್ತದೆ. ಕೈಯಲ್ಲಿರುವ ರಿಸೀವರ್‌ನಲ್ಲಿ (ಮೂಲಕ) ಮಾತನಾಡಿದಾಗ ಆ ಶಬ್ಧಗಳನ್ನು ಮೈಕ್ರೋಫೋನ್ ದಾಖಲಿಸಿಕೊಂಡು ಗರ್ಭದಲ್ಲಿರುವ ಮಗುವಿನ ಕಿವಿಗೆ ತಲುಪಿಸುತ್ತದೆ. ಗರ್ಭಿಣಿಯು ತಾನು ಗರ್ಭಧರಿಸಿದ ೪ನೇ ತಿಂಗಳಿನಿಂದ ಈ ರೀತಿಯ ಸಂದೇಶಗಳನ್ನು ಗರ್ಭಸ್ಥ ಶಿಶುವಿನ ಕಿವಿಗೆ ಕಳಿಸಬಹುದು.

ಈ ರೀತಿ ಗರ್ಭದೊಳಗಿನ ಶಿಶುವಿನೊಂದಿಗೆ ಸಂಭಾಷಣೆ ನಡೆಸುವುದರಿಂದ ಮಗುವಿನ ನರವ್ಯೂಹಗಳಲ್ಲಿ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಮತ್ತು ಮಾನಸಿಕ, ದೈಹಿಕವಾಗಿಯೂ ಮಗು ಆರೋಗ್ಯಪೂರ್ಣವಾಗಿ ಬೆಳವಣಿಗೆ ಹೊಂದುತ್ತದೆಂದು ಸಂಶೋಧಕರು ಪ್ರಯೋಗಗಳಿಂದ ಕಂಡುಕೊಂಡಿದ್ದಾರೆ ಅಲ್ಲದೇ ಹೆರಿಗೆಯ ಸಮಯದಲ್ಲಿಯೇ ಮಗು ತಾಯಿಯನ್ನು ಗ್ರಹಿಸಲು ಇದರಿಂದ ಸಾಧ್ಯವಾಗುತ್ತದೆ. ‘ಎಂಬ್ರಿಯೋ ಫೋನ್’ ಎನ್ನುವ ಈ ಉಪಕರಣ ಕೆಲವೇ ವರ್ಷಗಳಲ್ಲಿ ಮಾರುಕಟ್ಟೆಗೆ ಬರಲಿದೆ.
******

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...