ಬೆಳ್ಳಿ ಕಡಗ

ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು. ಅವರಿಗೆ ಒಬ್ಬ ಮಗನಿದ್ದ. ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ. ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು ನಮ್ಮ ಮಗ ಧನವಂತ. ಇವನು ದಡ್ಡ. ಹೇಗಾದರೂ ಮಾಡಿ ಇವನನ್ನು ಬುದ್ಧವಂತನನ್ನಾಗಿ ಮಾಡಿ. ನಮ್ಮ ಬಳಿ ಇರುವ ಆಸ್ತಿ, ಹಣವನ್ನು ಆಶ್ರಮಕ್ಕೆ ಒಪ್ಪಿಸಿ ನಾವೂ ಇಲ್ಲಿಯೇ ಕೆಲಸ ಮಾಡಿಕೊಮಡು ಇರುತ್ತೇವೆ’ ಎಂದು ಬೇಡಿಕೊಂಡರು. ಧನವಂತನನ್ನೊಮ್ಮೆ ನೋಡಿದ ಋಷಿ `ಆಯಿತು’ ಎಂದರು.

`ಧನವಂತಾ, ನೀನು ಸ್ವಲ್ಪ ದಿನಗಳವರೆಗೆ ಸ್ವಚ್ಛಂದವಾಗಿ ಆಶ್ರಮದಲ್ಲಿ ಸುತ್ತಾಡಿಕೊಂಡಿರು. ಇಲ್ಲಿ ನಿನಗಾಗಿ ಈಜುಕೊಳ, ಪ್ರಾಣಿ, ಪಕ್ಷಿಗಳಿವೆ’ ಎಂದರು. ಸಂತಸಗೊಂಡ ಧನವಂತ `ಆಗಲಿ’ ಎಂದು ಕುಣಿಯುತ್ತ ಹೋದ.

ಸ್ವಲ್ಪ ದಿನಗಳ ನಂತರ ಋಷಿಗಳು ತಾವು ಕಲಿತ ಎಲ್ಲ ವಿದ್ಯೆಗಳನ್ನೂ ಕಲಿಸಿ ಧನವಂತನನ್ನು ಬುದ್ಧವಂತನನ್ನಾಗಿ ಮಾಡಿದರು. ನಂತರ `ನಾನು ಕಲಿತ ವಿದ್ಯೆಯನ್ನೆಲ್ಲ ನಿನಗೆ ಧಾರೆ ಎರೆದಿದ್ದೇನೆ. ನಿನಗೆ ರಾಜನಾಗುವ ಲಕ್ಷಣಗಳಿವೆ. ನಿನಗೊಂದು ಬೆಳ್ಳಿ ಕಡಗ ಕೊಡುವೆ. ಇದು ಸಾಮಾನ್ಯವಾದುದಲ್ಲ. ನೀನು ಕೇಳಿದ್ದನ್ನೆಲ್ಲ ಕೊಡುತ್ತದೆ. ಆದರೆ, ಒಳ್ಳೆಯ ಕಾರ್ಯಗಳಿಗೆ ಮಾತ್ರ ಉಪಯೋಗಿಸು’ ಎಂದು ಹೇಳಿ ಬೆಳ್ಳಿ ಕಡಗವನ್ನು ಧನವಂತನಿಗೆ ಕೊಟ್ಟರು.

ರಾತ್ರಿ ಮಲಗಿದ್ದ ಸಮಯದಲ್ಲಿ ಧನವಂತನ ಮನದಲ್ಲಿ ಕೆಟ್ಟ ಯೋಚನೆಗಳು ಸುಳಿದಾಡಿದವು. ತುಸು ಸಮಯದ ನಂತರ ಆತ ಎದ್ದು ಕುಳಿತು, ಬೆಳ್ಳಿ ಕಡಗವನ್ನು ಕೈಗೆ ಹಾಕಿಕೊಂಡು ನನಗೊಂದು ಅರಮನೆ ಬೇಕೆಂದ. ಕೂಡಲೇ ಅಲ್ಲೊಂದು ಅರಮನೆ ಸೃಷ್ಟಿಯಾಯಿತು. ತನಗೊಬ್ಬ ರಾಜಕುಮಾರಿ ಬೇಕೆಂದ. ಮರುಕ್ಷಣವೇ ಅಲ್ಲಿಗೆ ಒಬ್ಬ ಸುಂದರ ಯುವತಿ ಬಂದಳು. ಹೀಗೆ ಅರಮನೆಯ ರಾಜನಿಗೆ ಬೇಕಾದ ಬೆಳ್ಳಿ, ಬಂಗಾರ, ವಜ್ರ, ವೈಢೂರ್‍ಯ, ಸೈನಿಕರು, ಸೇವಕರು ಎಲ್ಲವೂ ಬಂದವು. ಇದನ್ನೆಲ್ಲ ಗಮನಿಸಿದ ಋಷಿಗಳು `ಧನವಂತ, ಏನಿದು ವಿಚಿತ್ರ’ ಎಂದು ಕೋಪಗೊಂಡರು. ಆದರೆ, ಧನವಂತ ಅದನ್ನು ಗಮನಿಸುವ ಸ್ಥಿತಿಯಲ್ಲಿರಲಿಲ್ಲ. ಆತ ಅಹಂಕಾರದಿಂದ `ಏ! ಯಾರು ನೀನು? ನಡೆ ಇಲ್ಲಿಂದ’ ಎಂದು ಗದರಿಸಿದ.

`ಥೂ, ಪಾಪಿ, ನೀನು ಸರ್ವನಾಶವಾಗುತ್ತಿ ಹೋಗು’ ಎಂದು ಹೇಳಿ ಋಷಿಗಳು ಅಲ್ಲಿಂದ ಹೊರಟರು.

ಇತ್ತ ಧನವಂತ ತನ್ನ ರಾಜ್ಯದಲ್ಲಿ ದರ್ಪ, ಸೊಕ್ಕಿನಿಮದ ಮೆರೆಯುತ್ತ ಪ್ರಜೆಗಳಿಗೆ ಕಿರುಕುಳ ಕೊಡಲು ಆರಂಭಿಸಿದ. ಅನ್ಯಾಯವಾಗಿ ಭೂಕಂದಾಯ ವಸೂಲಿ ಮಾಡುವುದು, ಭೂಮಿ ಕಬಳಿಸುವುದು, ಪಕ್ಕದ ರಾಜರನ್ನು ಯುದ್ಧಕ್ಕೆ ಆಹ್ವಾನಿಸಿ ತನ್ನ ಬೆಳ್ಳಿ ಕಡಗದ ಸಹಾಯದಿಂದ ಅವರನ್ನು ಸೋಲಿಸಿ, ಅವರ ಸಮಸ್ತ ರಾಜ್ಯವನ್ನೂ ತೆಗೆದುಕೊಂಡು ಆ ರಾಜರನ್ನು ತನ್ನ ಗುಲಾಮರನ್ನಾಗಿಸಿಕೊಳ್ಳುವುದೇ ಅವನ ಬದುಕಾಯಿತು.

ಇದನ್ನೆಲ್ಲ ಅರಿತ ಋಷಿಗಳು ಧನವಂತನಿಗೆ ಕೊಟ್ಟ ಬೆಳ್ಳಿ ಕಡಗವನ್ನು ದಿವ್ಯ ಶಕ್ತಿಯಿಂದ ತಮ್ಮ ಬಳಿ ಬರುವಂತೆ ಮಾಡಿದರು. ಕೂಡಲೇ ಬೆಳ್ಳಿ ಕಡಗ ಋಷಿಗಳ ಹತ್ತಿರ ಬಂತು. ಅಂದಿನಿಂದ ಧನವಂತ ಹಂತ ಹಂತವಾಗಿ ಎಲ್ಲವನ್ನೂ ಕಳೆದುಕೊಂಡ. ತನ್ನ ತಪ್ಪಿನ ಅರಿವಾಗಿ ಪುನಃ ಋಷಿಗಳ ಹತ್ತಿರ ಬಂದು ತನ್ನ ತಪ್ಪನ್ನು ಮನ್ನಿಸುವಂತೆ ಕೇಳಿಕೊಂಡ. ಅವನ ಕೋರಿಕೆ ತಿರಸ್ಕರಿಸಿದ ಋಷಿಗಳು `ನಿನ್ನನ್ನು ಶಿಷ್ಯನನ್ನಾಗಿ ಮಾಡಿಕೊಂಡಿದ್ದೇ ತಪ್ಪು, ನಡೆ ಆಚೆ’ ಎಂದರು. ಧನವಂತನ ಹೆಂಡತಿ ಅಳುತ್ತ `ಸ್ವಾಮೀಜಿ, ನನ್ನ ಗಂಡನದು ತಪ್ಪಾಗಿದೆ. ಮನ್ನಿಸಿ. ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ಕೊಡಿ’ ಎಂದು ಬೇಡಿಕೊಂಡಳು. ಋಷಿಗಳು ಕಡೆಗೊಮ್ಮೆ ಆ ಮಾತಿಗೆ ಒಪ್ಪಿದರು. ಮುಂದೆ ಧನವಂತ ಸನ್ಮಾರ್ಗದಲ್ಲಿ ನಡೆದು ತನ್ನ ತಪ್ಪನ್ನು ತಿದ್ದಿಕೊಂಡ. ಆಶ್ರಮದಲ್ಲೇ ಇದ್ದು ಋಷಿಗಳ ಸೇವೆ ಮಾಡುತ್ತ ಕಾಲ ಕಳೆದ.

     *****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾಯ ಹೋಗುತ ಬಂತು
Next post ಎಂಥಾ ಬೇಗನೆ ಯವ್ವನ ಬಂತೆ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…