ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊರಕಿದಾ ಗುರು
Next post ಶ್ರೀಗುರು ಮಂತ್ರ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…