Home / ಬಾಲ ಚಿಲುಮೆ / ಕಥೆ / ದಯಾಳು ಶ್ರೀಮಂತ

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...