ತೇರು ಸಾಗಿತು ನೋಡೆಲೆ ನೀರೆ

ತೇರು ಸಾಗಿತು ನೋಡೆಲೆ ನೀರೆ
ಸರಸಿಜಮುಖಿ ಬಾರೆ ||ಪ.||

ಚಾರುತರದ ಚೌಗಾಲಿರಲು ಸ್ತವ
ಮೀರಿದ ಮಹಾಪಕಿ ದಾರಿಗೆ ಪೋಗುವ ||ಅ.ಪ.||

ಕಳಸದ ಕೆಳಗೆ ಮಾರು ಪಟಾಕ್ಷಿ
ಥಳಥಳಿಸುವ ಮಿಂಚಿನ ನಿಟಲಾಕ್ಷಿ
ಬಲಿದು ಬ್ರಹ್ಮನ ನೆಲೆಯೊಳೊಪ್ಪುವ
ಬಲು ಸುಳಿಗಾಳಿಗೆ ನಲಿ ನಲಿದಾಡುವ ||೧||

ಶಿಶುನಾಳಧೀಶನ ಹೊಸ ರಥವಿದು ತಿಳಿ
ರಸಿಕರಾಜ ಗೋವಿಂದನ ಸೇವಕ
ಪಸರಿಸಿ ನೋಡಲು ಜಸವಡದಿರುವದು
ಅಸಮಾಕ್ಷನು ಮೇಲೇರಿ ಕುಳಿತಿರುವ ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋಡಿ ತಡೆಯಲಾರದೆ ಕೇಳಿದೆ
Next post ಏ ಸಖರಿಯೆ ನಾ ಸಖರಿಯೆ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ರಾಜಕೀಯ ಮುಖಂಡರು

    ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…