ಒಂದು ಎರಡು
ತಿಂಡಿ ತಿನ್ನೋಕ್ ಹೊರಡು
ಮೂರು ನಾಕು
ನಾಕೇ ದೋಸೆ ಸಾಕು
ಐದು ಆರು
ಬಿಸಿ ಕಾಫಿ ಹೀರು
ಏಳು ಎಂಟು
ಶಾಲೆಗೆ ರಜ ಉಂಟು
ಒಂಬತ್ತು ಹತ್ತು
ಬಂತು ಆಟದ ಹೊತ್ತು
ಚೆಂಡು ದಾಂಡು ಆಮೇಲೆ
ಬುಗುರಿಗೆ ದಾರ ಸುತ್ತು.
*****
ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.
ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...
“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...
ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...
ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...