ಒಂದು ಎರಡು
ತಿಂಡಿ ತಿನ್ನೋಕ್ ಹೊರಡು
ಮೂರು ನಾಕು
ನಾಕೇ ದೋಸೆ ಸಾಕು
ಐದು ಆರು
ಬಿಸಿ ಕಾಫಿ ಹೀರು
ಏಳು ಎಂಟು
ಶಾಲೆಗೆ ರಜ ಉಂಟು
ಒಂಬತ್ತು ಹತ್ತು
ಬಂತು ಆಟದ ಹೊತ್ತು
ಚೆಂಡು ದಾಂಡು ಆಮೇಲೆ
ಬುಗುರಿಗೆ ದಾರ ಸುತ್ತು.
*****
ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.
ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...
“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...
ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...
ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...
“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...