Home / ಕವನ / ಕವಿತೆ / ಮುತ್ತು ರನ್ನದ ಕಿಡಿ ಉದುರೀತು

ಮುತ್ತು ರನ್ನದ ಕಿಡಿ ಉದುರೀತು

ಮುತ್ತು ರನ್ನದ ಕಿಡಿ ಉದುರೀತು
ಕಡು ವಿಷಯ ಹಿಂದಿನ ಪಾಪ ಬಂದು ಮಂದೆ ನಿಂತೀತು || ಪ ||

ಅಪ್ಪ ಅಣ್ಣಗಳೆಲ್ಲ ಕೇಳಿರಿ ತಪ್ಪಲಾರದು ಕರ್ಮದೋಷವು
ಒಪ್ಪುವಂಥಾ ಘಟವು ಬಿಟ್ಟು ಕ್ಷಣದಲಿ ಅಸು ಹಾರಿಹೋಯಿತು ||ಆ.ಪ.||

ದೇಶಕಧಿಕವಾದ ಹುಬ್ಬಳ್ಳಿ ಹುಚ್ಚಯ್ಯಸ್ವಾಮಿ
ಮಠದ ಪಟ್ಟದ ಚರಮೂರ್ತಿ ಅವರ ಕೀರ್ತಿ ಸಾರಿ ಸದ್ಭಕ್ತರಿಗೆ
ದುಃಖವು ಗಾರಗೊಂಡಿತು ಮನದ ಕೊನೆಯೊಳು
ಆರು ಮಾಡುವರೇನು ಇದಕೆ ಹುಟ್ಟಸಿದ ಶಿವ ತಾನೇ ಬಲ್ಲಾ || ೧ ||

ಏನು ಎಷ್ಟಿದರೊಳು ಎಷ್ಟು ದಿವಸ ಇದ್ದರೆ ಸಾವು ತಪ್ಪದು
ಮೃತ್ಯುಬುದ್ಧಿಯನ್ನು ಬಲ್ಲವರೊಳು ಕೇಳು
ಅಲ್ಲಮ ಮಹಾಪ್ರಭುವಿನ ಸಿರಿಯು ತುಂಬಿ
ಯೋಗಮಂದಿರದೊಳು ಬೆಳಗುವ ಕಳಿವುಳ್ಳ ಬಸವಾದಿ ಪ್ರಮಥರು || ೨ ||

ಕಾಶೀ ಗ್ರಾಮದ ಪುಣ್ಯ ತೀರಿತು ಬೈಲಾಯಿತು
ಬೈಲಿನೊಳಗೆ ಬೈಲು ಆಯಿತು ಕಡಿಗೆ ಆಯಿತು
ಒಡಿಯ ಶಿಶುನಾಳ ಈಶನಡಿಗೆ ಬಿಡದೆ ಭಜಿಸುವ ನಿಮ್ಮ ಧ್ಯಾನದಿ
ನುಡಿದ ಮಾತಿಗೆ ಕಸರು ಇದ್ದರೆ ತಿದ್ದಿ ಹೇಳಿರಿ ರಸಿಕರೆಲ್ಲಾ || ೩ ||

****

 

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...