ಮುತ್ತು ರನ್ನದ ಕಿಡಿ ಉದುರೀತು

ಮುತ್ತು ರನ್ನದ ಕಿಡಿ ಉದುರೀತು
ಕಡು ವಿಷಯ ಹಿಂದಿನ ಪಾಪ ಬಂದು ಮಂದೆ ನಿಂತೀತು || ಪ ||

ಅಪ್ಪ ಅಣ್ಣಗಳೆಲ್ಲ ಕೇಳಿರಿ ತಪ್ಪಲಾರದು ಕರ್ಮದೋಷವು
ಒಪ್ಪುವಂಥಾ ಘಟವು ಬಿಟ್ಟು ಕ್ಷಣದಲಿ ಅಸು ಹಾರಿಹೋಯಿತು ||ಆ.ಪ.||

ದೇಶಕಧಿಕವಾದ ಹುಬ್ಬಳ್ಳಿ ಹುಚ್ಚಯ್ಯಸ್ವಾಮಿ
ಮಠದ ಪಟ್ಟದ ಚರಮೂರ್ತಿ ಅವರ ಕೀರ್ತಿ ಸಾರಿ ಸದ್ಭಕ್ತರಿಗೆ
ದುಃಖವು ಗಾರಗೊಂಡಿತು ಮನದ ಕೊನೆಯೊಳು
ಆರು ಮಾಡುವರೇನು ಇದಕೆ ಹುಟ್ಟಸಿದ ಶಿವ ತಾನೇ ಬಲ್ಲಾ || ೧ ||

ಏನು ಎಷ್ಟಿದರೊಳು ಎಷ್ಟು ದಿವಸ ಇದ್ದರೆ ಸಾವು ತಪ್ಪದು
ಮೃತ್ಯುಬುದ್ಧಿಯನ್ನು ಬಲ್ಲವರೊಳು ಕೇಳು
ಅಲ್ಲಮ ಮಹಾಪ್ರಭುವಿನ ಸಿರಿಯು ತುಂಬಿ
ಯೋಗಮಂದಿರದೊಳು ಬೆಳಗುವ ಕಳಿವುಳ್ಳ ಬಸವಾದಿ ಪ್ರಮಥರು || ೨ ||

ಕಾಶೀ ಗ್ರಾಮದ ಪುಣ್ಯ ತೀರಿತು ಬೈಲಾಯಿತು
ಬೈಲಿನೊಳಗೆ ಬೈಲು ಆಯಿತು ಕಡಿಗೆ ಆಯಿತು
ಒಡಿಯ ಶಿಶುನಾಳ ಈಶನಡಿಗೆ ಬಿಡದೆ ಭಜಿಸುವ ನಿಮ್ಮ ಧ್ಯಾನದಿ
ನುಡಿದ ಮಾತಿಗೆ ಕಸರು ಇದ್ದರೆ ತಿದ್ದಿ ಹೇಳಿರಿ ರಸಿಕರೆಲ್ಲಾ || ೩ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಳವಿಯ ಜಾತ್ರೆಗಿ ಹೋಗೋಣು ಬನ್ನಿರಮ್ಮಾ
Next post ಗುಗ್ಗುಳ ಹೊರಟಿತಮ್ಮಾ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…