ಮುತ್ತು ರನ್ನದ ಕಿಡಿ ಉದುರೀತು

ಮುತ್ತು ರನ್ನದ ಕಿಡಿ ಉದುರೀತು
ಕಡು ವಿಷಯ ಹಿಂದಿನ ಪಾಪ ಬಂದು ಮಂದೆ ನಿಂತೀತು || ಪ ||

ಅಪ್ಪ ಅಣ್ಣಗಳೆಲ್ಲ ಕೇಳಿರಿ ತಪ್ಪಲಾರದು ಕರ್ಮದೋಷವು
ಒಪ್ಪುವಂಥಾ ಘಟವು ಬಿಟ್ಟು ಕ್ಷಣದಲಿ ಅಸು ಹಾರಿಹೋಯಿತು ||ಆ.ಪ.||

ದೇಶಕಧಿಕವಾದ ಹುಬ್ಬಳ್ಳಿ ಹುಚ್ಚಯ್ಯಸ್ವಾಮಿ
ಮಠದ ಪಟ್ಟದ ಚರಮೂರ್ತಿ ಅವರ ಕೀರ್ತಿ ಸಾರಿ ಸದ್ಭಕ್ತರಿಗೆ
ದುಃಖವು ಗಾರಗೊಂಡಿತು ಮನದ ಕೊನೆಯೊಳು
ಆರು ಮಾಡುವರೇನು ಇದಕೆ ಹುಟ್ಟಸಿದ ಶಿವ ತಾನೇ ಬಲ್ಲಾ || ೧ ||

ಏನು ಎಷ್ಟಿದರೊಳು ಎಷ್ಟು ದಿವಸ ಇದ್ದರೆ ಸಾವು ತಪ್ಪದು
ಮೃತ್ಯುಬುದ್ಧಿಯನ್ನು ಬಲ್ಲವರೊಳು ಕೇಳು
ಅಲ್ಲಮ ಮಹಾಪ್ರಭುವಿನ ಸಿರಿಯು ತುಂಬಿ
ಯೋಗಮಂದಿರದೊಳು ಬೆಳಗುವ ಕಳಿವುಳ್ಳ ಬಸವಾದಿ ಪ್ರಮಥರು || ೨ ||

ಕಾಶೀ ಗ್ರಾಮದ ಪುಣ್ಯ ತೀರಿತು ಬೈಲಾಯಿತು
ಬೈಲಿನೊಳಗೆ ಬೈಲು ಆಯಿತು ಕಡಿಗೆ ಆಯಿತು
ಒಡಿಯ ಶಿಶುನಾಳ ಈಶನಡಿಗೆ ಬಿಡದೆ ಭಜಿಸುವ ನಿಮ್ಮ ಧ್ಯಾನದಿ
ನುಡಿದ ಮಾತಿಗೆ ಕಸರು ಇದ್ದರೆ ತಿದ್ದಿ ಹೇಳಿರಿ ರಸಿಕರೆಲ್ಲಾ || ೩ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಳವಿಯ ಜಾತ್ರೆಗಿ ಹೋಗೋಣು ಬನ್ನಿರಮ್ಮಾ
Next post ಗುಗ್ಗುಳ ಹೊರಟಿತಮ್ಮಾ

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…